ದೆಹಲಿ: ಇತ್ತೀಚೆಗೆ ಬಿಜೆಪಿ ಸೇರಲು ಆಮ್ ಆದ್ಮಿ ಪಕ್ಷದ ಏಳು ಶಾಸಕರಿಗೆ ₹ 25 ಕೋಟಿ ಆಫರ್ ಮಾಡಿತ್ತು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದರು.
ಅರವಿಂದ್ ಕೇಜ್ರಿವಾಲ್ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಈ ಬಗ್ಗೆ ತಿಳಿಸಿದ್ದು, ಇತ್ತೀಚೆಗೆ ಅವರು ದೆಹಲಿಯಲ್ಲಿರುವ ನಮ್ಮ 7 ಶಾಸಕರನ್ನು ಸಂಪರ್ಕಿಸಿ, ‘ಕೆಲವು ದಿನಗಳ ನಂತರ ನಾವು ಕೇಜ್ರಿವಾಲ್ ಅವರನ್ನು ಬಂಧಿಸುತ್ತೇವೆ. ಆ ಬಳಿಕ ಶಾಸಕರನ್ನು ವಿಭಜನೆ ಮಾಡುತ್ತೇವೆ. 21 ಶಾಸಕರ ಜತೆ ಮಾತುಕತೆ ನಡೆಸಲಾಗಿದೆ. ಇತರರೊಂದಿಗೆ ಸಹ ಮಾತನಾಡುತ್ತೇವೆ. ಆ ನಂತರ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಸರ್ಕಾರವನ್ನು ಉರುಳಿಸುತ್ತೇವೆ. ನೀವು ಕೂಡ ಬರಬಹುದು. ನಾವು₹ 25 ಕೋಟಿ ನೀಡುತ್ತೇವೆ, ನೀವು ಬಿಜೆಪಿ ಟಿಕೆಟ್ನಲ್ಲಿ ಚುನಾವಣೆಗೆ ಸ್ಪರ್ಧಿಸಬಹುದು ಎಂದು ಬಿಜೆಪಿ ಹೇಳಿರುವುದಾಗಿ ಬರೆದುಕೊಂಡಿದ್ದಾರೆ.
ಮಾಹಿತಿಯ ಪ್ರಕಾರ, ಅವರು ಇದುವರೆಗೆ ಏಳು ಶಾಸಕರನ್ನು ಮಾತ್ರ ಸಂಪರ್ಕಿಸಿದ್ದಾರೆ. ಅವರೆಲ್ಲರೂ (ಬಿಜೆಪಿ ಸೇರಲು) ನಿರಾಕರಿಸಿದ್ದಾರೆ. ಇದರರ್ಥ ಯಾವುದೇ ಮದ್ಯ ಹಗರಣದ ತನಿಖೆಗಾಗಿ ನನ್ನನ್ನು ಬಂಧಿಸಲಾಗುತ್ತಿಲ್ಲ. ಆದರೆ ಅವರು ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಸರ್ಕಾರವನ್ನು ಉರುಳಿಸಲು ಪಿತೂರಿ ಮಾಡುತ್ತಿದ್ದಾರೆ. ಕಳೆದ ಒಂಬತ್ತು ವರ್ಷಗಳಲ್ಲಿ, ಅವರು ನಮ್ಮ ಸರ್ಕಾರವನ್ನು ಉರುಳಿಸಲು ಅನೇಕ ಪಿತೂರಿಗಳನ್ನು ರೂಪಿಸಿದರು. ಆದರೆ ಅವರಿಗೆ ಯಶಸ್ಸು ಸಿಗಲಿಲ್ಲ. ದೇವರು ಮತ್ತು ಜನರು ಯಾವಾಗಲೂ ನಮ್ಮನ್ನು ಬೆಂಬಲಿಸಿದರು. ನಮ್ಮ ಎಲ್ಲಾ ಶಾಸಕರು ಕೂಡ ಬಲವಾಗಿ ಜೊತೆಯಾಗಿದ್ದಾರೆ. ಈ ಬಾರಿಯೂ ಈ ಜನರು ತಮ್ಮ ಕೆಟ್ಟ ಉದ್ದೇಶಗಳಲ್ಲಿ ವಿಫಲರಾಗುತ್ತಾರೆ ಎಂದರು.
ದೆಹಲಿಯ ಜನರಿಗಾಗಿ ತಮ್ಮ ಸರ್ಕಾರ ಎಷ್ಟು ಕೆಲಸ ಮಾಡಿದೆ ಎಂದು “ಈ ಜನರಿಗೆ” ತಿಳಿದಿದೆ. ಅವರು ಸೃಷ್ಟಿಸಿದ ಎಲ್ಲಾ ಅಡೆತಡೆಗಳ ಹೊರತಾಗಿಯೂ, ನಾವು ತುಂಬಾ ಸಾಧಿಸಿದ್ದೇವೆ. ದೆಹಲಿಯ ಜನರು ಎಎಪಿಯನ್ನು ಅಪಾರವಾಗಿ ಪ್ರೀತಿಸುತ್ತಾರೆ. ಆದ್ದರಿಂದ, ಚುನಾವಣೆಯಲ್ಲಿ ಎಎಪಿಯನ್ನು ಸೋಲಿಸುವುದು ಅವರಿಂದ ಸಾಧ್ಯವಿಲ್ಲ. ಹಾಗಾಗಿ ನಕಲಿ ಮದ್ಯದ ಹಗರಣದ ನೆಪದಲ್ಲಿ ಅವರನ್ನು ಬಂಧಿಸುವ ಮೂಲಕ ಸರ್ಕಾರವನ್ನು ಉರುಳಿಸಲು ಅವರು ಬಯಸುತ್ತಿದ್ದಾರೆ ಎಂದು ಕೇಜ್ರಿವಾಲ್ ಆರೋಪ ಮಾಡಿದ್ದಾರೆ.
पिछले दिनों इन्होंने हमारे दिल्ली के 7 MLAs को संपर्क कर कहा है – “कुछ दिन बाद केजरीवाल को गिरफ़्तार कर लेंगे। उसके बाद MLAs को तोड़ेंगे। 21 MLAs से बात हो गयी है। औरों से भी बात कर रहे हैं। उसके बाद दिल्ली में आम आदमी पार्टी की सरकार गिरा देंगे। आप भी आ जाओ। 25 करोड़ रुपये देंगे…
— Arvind Kejriwal (@ArvindKejriwal) January 27, 2024