News Karnataka Kannada
Friday, May 03 2024
ದೆಹಲಿ

ಬಿಜೆಪಿ ಸೇರಲು ಆಮ್ ಆದ್ಮಿ ಪಕ್ಷದ 7 ಶಾಸಕರಿಗೆ ₹ 25 ಕೋಟಿ ಆಫರ್: ಅರವಿಂದ್ ಕೇಜ್ರಿವಾಲ್

ಎಎಪಿ ರಾಜ್ಯದ ಎಲ್ಲಾ 13 ಮತ್ತು ಚಂಡೀಗಢದ 1 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಶನಿವಾರ ಘೋಷಿಸಿದ್ದಾರೆ.
Photo Credit : News Kannada

ದೆಹಲಿ: ಇತ್ತೀಚೆಗೆ ಬಿಜೆಪಿ ಸೇರಲು ಆಮ್ ಆದ್ಮಿ ಪಕ್ಷದ ಏಳು ಶಾಸಕರಿಗೆ ₹ 25 ಕೋಟಿ ಆಫರ್ ಮಾಡಿತ್ತು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದರು.

ಅರವಿಂದ್ ಕೇಜ್ರಿವಾಲ್ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಈ ಬಗ್ಗೆ ತಿಳಿಸಿದ್ದು, ಇತ್ತೀಚೆಗೆ ಅವರು ದೆಹಲಿಯಲ್ಲಿರುವ ನಮ್ಮ 7 ಶಾಸಕರನ್ನು ಸಂಪರ್ಕಿಸಿ, ‘ಕೆಲವು ದಿನಗಳ ನಂತರ ನಾವು ಕೇಜ್ರಿವಾಲ್ ಅವರನ್ನು ಬಂಧಿಸುತ್ತೇವೆ. ಆ ಬಳಿಕ ಶಾಸಕರನ್ನು ವಿಭಜನೆ ಮಾಡುತ್ತೇವೆ. 21 ಶಾಸಕರ ಜತೆ ಮಾತುಕತೆ ನಡೆಸಲಾಗಿದೆ. ಇತರರೊಂದಿಗೆ ಸಹ ಮಾತನಾಡುತ್ತೇವೆ. ಆ ನಂತರ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಸರ್ಕಾರವನ್ನು ಉರುಳಿಸುತ್ತೇವೆ. ನೀವು ಕೂಡ ಬರಬಹುದು. ನಾವು₹ 25 ಕೋಟಿ ನೀಡುತ್ತೇವೆ, ನೀವು ಬಿಜೆಪಿ ಟಿಕೆಟ್‌ನಲ್ಲಿ ಚುನಾವಣೆಗೆ ಸ್ಪರ್ಧಿಸಬಹುದು ಎಂದು ಬಿಜೆಪಿ ಹೇಳಿರುವುದಾಗಿ ಬರೆದುಕೊಂಡಿದ್ದಾರೆ.

ಮಾಹಿತಿಯ ಪ್ರಕಾರ, ಅವರು ಇದುವರೆಗೆ ಏಳು ಶಾಸಕರನ್ನು ಮಾತ್ರ ಸಂಪರ್ಕಿಸಿದ್ದಾರೆ. ಅವರೆಲ್ಲರೂ (ಬಿಜೆಪಿ ಸೇರಲು) ನಿರಾಕರಿಸಿದ್ದಾರೆ. ಇದರರ್ಥ ಯಾವುದೇ ಮದ್ಯ ಹಗರಣದ ತನಿಖೆಗಾಗಿ ನನ್ನನ್ನು ಬಂಧಿಸಲಾಗುತ್ತಿಲ್ಲ. ಆದರೆ ಅವರು ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಸರ್ಕಾರವನ್ನು ಉರುಳಿಸಲು ಪಿತೂರಿ ಮಾಡುತ್ತಿದ್ದಾರೆ. ಕಳೆದ ಒಂಬತ್ತು ವರ್ಷಗಳಲ್ಲಿ, ಅವರು ನಮ್ಮ ಸರ್ಕಾರವನ್ನು ಉರುಳಿಸಲು ಅನೇಕ ಪಿತೂರಿಗಳನ್ನು ರೂಪಿಸಿದರು. ಆದರೆ ಅವರಿಗೆ ಯಶಸ್ಸು ಸಿಗಲಿಲ್ಲ. ದೇವರು ಮತ್ತು ಜನರು ಯಾವಾಗಲೂ ನಮ್ಮನ್ನು ಬೆಂಬಲಿಸಿದರು. ನಮ್ಮ ಎಲ್ಲಾ ಶಾಸಕರು ಕೂಡ ಬಲವಾಗಿ ಜೊತೆಯಾಗಿದ್ದಾರೆ. ಈ ಬಾರಿಯೂ ಈ ಜನರು ತಮ್ಮ ಕೆಟ್ಟ ಉದ್ದೇಶಗಳಲ್ಲಿ ವಿಫಲರಾಗುತ್ತಾರೆ ಎಂದರು.

ದೆಹಲಿಯ ಜನರಿಗಾಗಿ ತಮ್ಮ ಸರ್ಕಾರ ಎಷ್ಟು ಕೆಲಸ ಮಾಡಿದೆ ಎಂದು “ಈ ಜನರಿಗೆ” ತಿಳಿದಿದೆ. ಅವರು ಸೃಷ್ಟಿಸಿದ ಎಲ್ಲಾ ಅಡೆತಡೆಗಳ ಹೊರತಾಗಿಯೂ, ನಾವು ತುಂಬಾ ಸಾಧಿಸಿದ್ದೇವೆ. ದೆಹಲಿಯ ಜನರು ಎಎಪಿಯನ್ನು ಅಪಾರವಾಗಿ ಪ್ರೀತಿಸುತ್ತಾರೆ. ಆದ್ದರಿಂದ, ಚುನಾವಣೆಯಲ್ಲಿ ಎಎಪಿಯನ್ನು ಸೋಲಿಸುವುದು ಅವರಿಂದ ಸಾಧ್ಯವಿಲ್ಲ. ಹಾಗಾಗಿ ನಕಲಿ ಮದ್ಯದ ಹಗರಣದ ನೆಪದಲ್ಲಿ ಅವರನ್ನು ಬಂಧಿಸುವ ಮೂಲಕ ಸರ್ಕಾರವನ್ನು ಉರುಳಿಸಲು ಅವರು ಬಯಸುತ್ತಿದ್ದಾರೆ ಎಂದು ಕೇಜ್ರಿವಾಲ್ ಆರೋಪ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು