ನವದೆಹಲಿ : ಸಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಢೀಪ್ ಫೇಕ್ ಜಾಹಿರಾತಿಗೆ ಸಿಡಿದೆದ್ದ ಬಾಲಿವುಡ್ ನಟ ಕಾಂಗ್ರೆಸ್ ಪಕ್ಷದ ವಿರುದ್ಧ ಮುಂಬೈ ಪೊಲೀಸರಿಗೆ ದೂರು ನೀಡಿದ್ದಾರೆ.
ದೂರದರ್ಶನ ಕಾರ್ಯಕ್ರಮ ʻಸತ್ಯಮೇವ ಜಯತೇʼ ಸಂಚಿಕೆಯನ್ನು ಒಳಗೊಂಡಂತೆ ವಿವಾದಿತ ಜಾಹೀರಾತಿನಲ್ಲಿ ಅಮೀರ್ ಖಾನ್ ದೃಶ್ಯವನ್ನು ಸೇರಿಸಲಾಗಿದೆ. ಬಿಜೆಪಿಯ ನಾಗರಿಕರ ರೂ 15 ಲಕ್ಷ ಜಮೆ ಮಾಡುವ ಭರವಸೆಯನ್ನು ಅಮೀರ್ ಖಾನ್ ಟೀಕಿಸಿರುವಂತೆ ವಿಡಿಯೋವನ್ನು ತಯಾರಿಸಲಾಗಿದೆ. ಹಾಗಾಗಿ ಈ ಕೂಡಲೇ ಕ್ರಮ ತೆಗೆದುಕೊಳ್ಳುವಂತೆ ದೂರಿನಲ್ಲಿ ಮನವಿ ಮಾಡಲಾಗಿದೆ.