Categories: ದೆಹಲಿ

ಅವಹೇಳನಕಾರಿ ಪೋಸ್ಟ್‌ ಮಾಡಿದ್ದ ಸುಪ್ರಿಯಾ ಶ್ರೀನಾಟೆ ವಿರುದ್ಧ ಕ್ರಮಕ್ಕೆ ಆಗ್ರಹ

ನವದೆಹಲಿ: ಹಿಮಾಚಲ ಪ್ರದೇಶದ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಬಾಲಿವುಡ್‌ ನಟಿ ಕಂಗನಾ ರನೌತ್‌ ಅವರ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಪೋಸ್ಟ್‌ ಮಾಡಿದ್ದ ಸುಪ್ರಿಯಾ ಶ್ರೀನಾಟೆ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ರಾಷ್ಟ್ರೀಯ ಮಹಿಳಾ ಆಯೋಗವು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.

ಸದ್ಯ ಸುಪ್ರಿಯಾ ಅವರ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ರನೌತ್‌ ಫೋಟೊ ಸಮೇತ ಮಾಡಿದ್ದ ಪೋಸ್ಟ್‌ನ್ನು ಅಳಿಸಿಹಾಕಲಾಗಿದೆ. ಈ ಕುರಿತು ಪ್ರತಿಕ್ರಯಿಸಿರುವ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ, ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ ಎಂದು ತಿಳಿಸಿದ್ದಾರೆ.

ಈ ವಿಚಾರ ಕುರಿತು ಸ್ಪಷ್ಟನೆ ನೀಡಿರುವ ಸುಪ್ರಿಯಾ, ಯಾರೋ ಕಿಡೀಗೇಡಿಗಳು ನನ್ನ ಖಾತೆಯ ಆಕ್ಸೆಸ್‌ ಪಡೆದು ಪೇಸ್‌ಬುಕ್‌ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ಕಂಗಾನಾ ಅವರ ಬಗ್ಗೆ ಆಕ್ಷೇಪಾರ್ಹ ಪೋಸ್ಟ್‌ನ್ನು ಹಂಚಿಕೊಂಡಿದ್ದಾರೆ. ಇದನ್ನು ಮಾಡಿದವರು ಯಾರು ಎಂದು ತಿಳಿಯಲು ಮುಂದಾಗಿದ್ದೇನೆ ಜೊತೆಗೆ ಖಾತೆ ಕುರಿತು ವರದಿ ಮಾಡಿದ್ದೇನೆ ಎಂದು ಸುಪ್ರಿಯಾ ಹೇಳಿಕೊಂಡಿದ್ದಾರೆ.

ಈ ಪೋಸ್ಟ್‌ ಅವಹೇಳನಕಾರಿಯಾಗಿದೆ ಎಂದು ತಿಳಿದ ತಕ್ಷಣ ನಾನು ಪೋಸ್ಟ್‌ನ್ನು ಅಳಿಸಿದ್ದೇನೆ. ನನ್ನ ಬಗ್ಗೆ ತಿಳಿದಿರುವವರಿಗೆ ಗೊತ್ತಿದೆ ನಾನು ಯಾವುದೇ ಮಹಿಳೆಯ ಕುರಿತು ವೈಯಕ್ತಿಕ ಅಥವಾ ಅಸಭ್ಯ ಕಾಮೆಂಟ್‌ಗಳನ್ನು ಎಂದಿಗೂ ಮಾಡಲಾರೆ ಎಂದು ಹೇಳಿದ್ದಾರೆ

Nisarga K

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

8 mins ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

22 mins ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

34 mins ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

50 mins ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

59 mins ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

1 hour ago