ನವದೆಹಲಿ: ಹಿರಿಯ ಕಾಂಗ್ರೆಸಿಗ ಆರ್.ವಿ ದೇಶಪಾಂಡೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
2024ರ ಲೋಕಸಭೆ ಚುನಾವಣೆ ಸಮೀಪವಾಗುತ್ತಿದ್ದಂತೆ ದೇಶಪಾಂಡೆ ದೆಹಲಿ ಭೇಟಿ ಮಹತ್ವ ಪಡೆದುಕೊಂಡಿದೆ. ಸಚಿವ ಪ್ರಹ್ಲಾದ್ ಜೋಶಿ ಅವರೊಂದಿಗೆ ದೇಶಪಾಂಡೆ ಅಮಿತ್ ಶಾ ಅವರನ್ನು ಭೇಟಿಯಾಗಿದ್ದು, ದೇಶಪಾಂಡೆ ಅವರು ತಮ್ಮ ಪುತ್ರ ಪ್ರಶಾಂತ ದೇಶಪಾಂಡೆಯನ್ನು ಉತ್ತರ ಕನ್ನಡ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನಿಲ್ಲಿಸಬಹುದೇ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಭರ್ಜರಿ ಬಹುಮತದೊಂದಿಗೆ ಜಯಗಳಿಸಿ ಅಧಿಕಾರಕ್ಕೆ ಬಂದಿದ್ದರೂ ದೇಶಪಾಂಡೆ ಅವರಿಗೆ ಸಚಿವ ಪದವಿ ನೀಡದಿರುವುದು ಕ್ಷೇತ್ರದ ಕಾಂಗ್ರೆಸ್ ಮುಖಂಡರ ಅಸಮಾಧಾನಕ್ಕೆ ಕಾರಣವಾಗಿದೆ.