ಹೊಸದಿಲ್ಲಿ: ಕಾಂಗ್ರೆಸ್ ನ ಜಿ-23ರ ಪ್ರಮುಖ ನಾಯಕ ಆನಂದ್ ಶರ್ಮಾ ಅವರು ಭಾರತ ಜೋಡೋ ಯಾತ್ರೆಗೆ ಬೆಂಬಲ ವ್ಯಕ್ತಪಡಿಸಿದ್ದು, ಹಿಮಾಚಲ ಪ್ರದೇಶದಲ್ಲಿ ನಡೆಯಲಿರುವ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
“ನನ್ನ ಒಗ್ಗಟ್ಟನ್ನು ವ್ಯಕ್ತಪಡಿಸುತ್ತಿದ್ದೇನೆ ಮತ್ತು ರಾಹುಲ್ ಗಾಂಧಿ ಮತ್ತು ಎಲ್ಲಾ ಯಾತ್ರಿಗಳಿಗೆ ಶುಭಾಶಯಗಳನ್ನು ತಿಳಿಸುತ್ತಿದ್ದೇನೆ” ಎಂದು ಶರ್ಮಾ ಟ್ವೀಟ್ ಮಾಡಿದ್ದಾರೆ. ಭಾರತ್ ಜೋಡೋ ಯಾತ್ರೆಯು ಭಾರತದ ಸಮಗ್ರ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯುವ, ಅನ್ಯಾಯ, ಅಸಮಾನತೆ ಮತ್ತು ಅಸಹಿಷ್ಣುತೆ ವಿರುದ್ಧ ಜನರನ್ನು ಸಜ್ಜುಗೊಳಿಸುವ ಧ್ಯೇಯವಾಗಿದೆ. ಅಲ್ಲದೆ ರಾಷ್ಟ್ರೀಯ ಏಕತೆಯನ್ನು ಬಲಪಡಿಸುವ ಬದ್ಧತೆಯೂ ಇದೆ” ಎಂದು ಹೇಳಿದರು.
“ಜಮ್ಮು-ಕಾಶ್ಮೀರಕ್ಕೆ ಹೋಗುವ ಮಾರ್ಗದಲ್ಲಿ ನನ್ನ ತವರು ರಾಜ್ಯವಾದ ಹಿಮಾಚಲದ ಬಳಿ ತಲುಪಿದಾಗ ಯಾತ್ರೆಗೆ ಸೇರಲು ಎದುರು ನೋಡುತ್ತಿದ್ದೇನೆ” ಎಂದು ಅವರು ಹೇಳಿದರು.
ತಮ್ಮನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿ ಶರ್ಮಾ ಇತ್ತೀಚೆಗೆ ಹಿಮಾಚಲ ಪ್ರದೇಶ ಕಾಂಗ್ರೆಸ್ ಸಂಚಾಲನಾ ಸಮಿತಿಯನ್ನು ತೊರೆದರು. ಪಕ್ಷವು ಒಗ್ಗಟ್ಟಿನ ಮುಖವನ್ನು ಹೊಂದುವ ಭರವಸೆ ಹೊಂದಿದೆ ಮತ್ತು ಶರ್ಮಾ ಅವರನ್ನು ಯಾತ್ರೆಗೆ ಸೇರಲು ಆಹ್ವಾನಿಸಲಾಗಿದೆ, ಆದರೆ ಅವರ ತವರು ರಾಜ್ಯವಾದ ಹಿಮಾಚಲದಲ್ಲಿ ಸೇರಲಿದ್ದಾರೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಬುಧವಾರ ಇದು ಭಾರತೀಯ ರಾಜಕೀಯದಲ್ಲಿ ಒಂದು ಟರ್ನಿಂಗ್ ಪಾಯಿಂಟ್ ಆಗಲಿದೆ ಮತ್ತು ಇದು ಹೊಸ ಆರಂಭವನ್ನು ಸೂಚಿಸುತ್ತದೆ ಎಂದು ಹೇಳಿದರು.