ನವದೆಹಲಿ: ದೆಹಲಿ ಮದ್ಯ ಹಗರಣದ ಕಿಂಗ್ಪಿನ್ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಎಂದು ಜಾರಿ ನಿರ್ದೇಶನಾಲಯ ಹೇಳಿದೆ.
ಬಂಧನಕ್ಕೆ ಒಳಗಾದ ಕೇಜ್ರಿವಾಲ್ ಅವರನ್ನು ಇಡಿ ಅಧಿಕಾರಿಗಳು ಇಂದು ಪಿಎಂಎಲ್ಎ ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸಿ, ಇಡಿ ಪರ ವಕೀಲರು, ಕೇಜ್ರಿವಾಲ್ ಕೆಲವು ವ್ಯಕ್ತಿಗಳಿಗೆ ಕಿಕ್-ಬ್ಯಾಕ್ ಸ್ವೀಕರಿಸಲು ಸೂಚಿಸಿದರು. ಈ ಹಣವನ್ನು ಆಪ್ ಗೋವಾ ಚುನಾವಣೆಯಲ್ಲಿ ಬಳಸಲಾಗಿತ್ತು.
ಮದ್ಯದ ನೀತಿಯ ರಚನೆಯಲ್ಲಿ ಅವರು ನೇರವಾಗಿ ಭಾಗಿಯಾಗಿದ್ದು ಅವರೇ ಕಿಂಗ್ ಪಿನ್, ಕಿಕ್ಬ್ಯಾಕ್ಗೆ ಬೇಡಿಕೆ ಇಟ್ಟಿದ್ದರು ಎಂದು ಮಾಹಿತಿ ನೀಡಿದರು.