ದೆಹಲಿ: ಮದ್ಯನೀತಿ ಹಗರಣ ಪ್ರಕರಣದಲ್ಲಿ ಜೈಲು ಸೇರಿರುವ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ವಿಭವ್ ಕುಮಾರ್ ವಿರುದ್ಧ ವಿಜಿಲೆನ್ಸ್ ಇಲಾಖೆ ಮಹತ್ವದ ಕ್ರಮ ಕೈಗೊಂಡಿದ್ದು, ಅವರನ್ನು ವಜಾಗೊಳಿಸಲಾಗಿದೆ.
ಅರವಿಂದ್ ಕೇಜ್ರಿವಾಲ್ ಅವರ ಖಾಸಗಿ ಕಾರ್ಯದರ್ಶಿ ವಿಭವ್ ಕುಮಾರ್ ನೇಮಕ ಪ್ರಕ್ರಿಯೆ ಸರಿಯಾಗಿ ನಡೆದಿರಲಿಲ್ಲ ಎನ್ನುವ ಕಾರಣ ಕೊಟ್ಟು ಅವರನ್ನು ವಿಚಕ್ಷಣ ಇಲಾಖೆ ವಜಾಗೊಳಿಸಿದೆ.
ದೆಹಲಿ ಮದ್ಯ ಹಗರಣ ಪ್ರಕರಣದಲ್ಲಿ ಏಪ್ರಿಲ್ 8 ರಂದು ಜಾರಿ ನಿರ್ದೇಶನಾಲಯವು ವಿಭವ್ ಕುಮಾರ್ ಅವರನ್ನು ವಿಚಾರಣೆ ನಡೆಸಿತ್ತು.
ವಿಭವ್ ಕುಮಾರ್ ಅವರು ತಿಹಾರ್ ಜೈಲಿನಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ನಿನ್ನೆ ಭೇಟಿಯಾಗಿದ್ದರು.