ದೆಹಲಿ: ದೆಹಲಿಯ ಸುಂದರ್ ನಗರಿ ಪ್ರದೇಶದಲ್ಲಿರುವ ದೇವಸ್ಥಾನದಲ್ಲಿ ಪ್ರಸಾದ ತಿಂದಿದ್ದಾರೆ ಎಂಬ ಕಾರಣಕ್ಕೆ ಅಂಗವಿಕಲ ಮುಸ್ಲಿಂ ವ್ಯಕ್ತಿಯನ್ನು ಕಟ್ಟಿ ಹಾಕಿ ಥಳೀಸಲಾಗಿದ್ದು, ತೀವ್ರ ಗಾಯಗೊಂಡ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಹಲವಾರು ಜನರನ್ನು ಬಂಧಿಸಲಾಗಿದೆ.
ವ್ಯಕ್ತಿಯನ್ನು ಮಹಮ್ಮದ್ ಇಸಾರ್ ಎಂದು ಗುರುತಿಸಲಾಗಿದ್ದು, ಆತನನ್ನು ಕಂಬಕ್ಕೆ ಕಟ್ಟಿಹಾಕಿ ಜನರ ಗುಂಪೊಂದು ಥಳಿಸಿದೆ ಎನ್ನಲಾಗಿದೆ. ತೀವ್ರ ಗಾಯಗೊಂಡ ವ್ಯಕ್ತಿ ಕೆಲವೇ ಗಂಟೆಗಳಲ್ಲಿ ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆರೋಪಿಗಳನ್ನು ಗುರುತಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.