News Karnataka Kannada
Saturday, April 27 2024
ದೆಹಲಿ

ಬಿಜೆಡಿ ತೊರೆದು ಬಿಜೆಪಿಗೆ ಸೇರಿದ ಭರ್ತೃಹರಿ ಮಹತಾಬ್

ಕಟಕ್‌ನ ಆರು ಬಾರಿ ಸಂಸದರಾಗಿರುವ ಭರ್ತೃಹರಿ ಮಹತಾಬ್ ಅವರು ಆಡಳಿತಾರೂಢ ಬಿಜು ಜನತಾ ದಳ ತೊರೆದು ಪ್ರಮುಖ ರಾಜ್ಯ ನಾಯಕರ ಸಮ್ಮುಖದಲ್ಲಿ ಬಿಜೆಪಿ ಸೇರಿದ್ದಾರೆ.
Photo Credit : NewsKarnataka

ದೆಹಲಿ: ಕಟಕ್‌ನ ಆರು ಬಾರಿ ಸಂಸದರಾಗಿರುವ ಭರ್ತೃಹರಿ ಮಹತಾಬ್ ಅವರು ಆಡಳಿತಾರೂಢ ಬಿಜು ಜನತಾ ದಳ ತೊರೆದು ಪ್ರಮುಖ ರಾಜ್ಯ ನಾಯಕರ ಸಮ್ಮುಖದಲ್ಲಿ ಬಿಜೆಪಿ ಸೇರಿದ್ದಾರೆ.

2019 ರ ಸಾರ್ವತ್ರಿಕ ಚುನಾವಣೆಯಲ್ಲಿ, ಮಹತಾಬ್ ಅವರು ಕಟಕ್ ಲೋಕಸಭಾ ಸ್ಥಾನ ಗೆದ್ದಿದ್ದು, ಅವರ ಸಮೀಪ ಪ್ರತಿಸ್ಪರ್ಧಿ ಬಿಜೆಪಿಯ ಪ್ರಕಾಶ್ ಮಿಶ್ರಾ ಅವರನ್ನು ಭಾರಿ ಮತಗಳ ಅಂತರದಿಂದ ಸೋಲಿಸಿದರು.

ಮಹತಾಬ್ ಅವರು 1998 ರಲ್ಲಿ ಕಟಕ್‌ನಿಂದ ಲೋಕಸಭೆಗೆ ಮೊದಲ ಬಾರಿಗೆ ಆಯ್ಕೆಯಾಗಿದ್ದು ನಂತರ 1999, 2004, 2009, ಮತ್ತು 2014 ರಲ್ಲಿ ಲೋಕಸಭೆಗೆ ಮರು ಆಯ್ಕೆಯಾದರು.

67 ವರ್ಷದ ಭರ್ತೃಹರಿ ಮಹತಾಬ್  ಲೋಕಸಭೆ ಚುನಾವಣೆಗೆ ಕಣಕ್ಕಿಳಿಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಸಂಸತ್ತಿನಲ್ಲಿ ಚರ್ಚೆಗಳಲ್ಲಿ ಅತ್ಯುತ್ತಮ ಪ್ರದರ್ಶನಕ್ಕಾಗಿ 2017 ರಿಂದ 2020 ರವರೆಗೆ ಸತತ ನಾಲ್ಕು ವರ್ಷಗಳ ಕಾಲ ಅವರಿಗೆ “ಸಂಸದ್ ರತ್ನ” ಪ್ರಶಸ್ತಿಯನ್ನು ನೀಡಲಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು