ದೆಹಲಿ: ಕಟಕ್ನ ಆರು ಬಾರಿ ಸಂಸದರಾಗಿರುವ ಭರ್ತೃಹರಿ ಮಹತಾಬ್ ಅವರು ಆಡಳಿತಾರೂಢ ಬಿಜು ಜನತಾ ದಳ ತೊರೆದು ಪ್ರಮುಖ ರಾಜ್ಯ ನಾಯಕರ ಸಮ್ಮುಖದಲ್ಲಿ ಬಿಜೆಪಿ ಸೇರಿದ್ದಾರೆ.
2019 ರ ಸಾರ್ವತ್ರಿಕ ಚುನಾವಣೆಯಲ್ಲಿ, ಮಹತಾಬ್ ಅವರು ಕಟಕ್ ಲೋಕಸಭಾ ಸ್ಥಾನ ಗೆದ್ದಿದ್ದು, ಅವರ ಸಮೀಪ ಪ್ರತಿಸ್ಪರ್ಧಿ ಬಿಜೆಪಿಯ ಪ್ರಕಾಶ್ ಮಿಶ್ರಾ ಅವರನ್ನು ಭಾರಿ ಮತಗಳ ಅಂತರದಿಂದ ಸೋಲಿಸಿದರು.
ಮಹತಾಬ್ ಅವರು 1998 ರಲ್ಲಿ ಕಟಕ್ನಿಂದ ಲೋಕಸಭೆಗೆ ಮೊದಲ ಬಾರಿಗೆ ಆಯ್ಕೆಯಾಗಿದ್ದು ನಂತರ 1999, 2004, 2009, ಮತ್ತು 2014 ರಲ್ಲಿ ಲೋಕಸಭೆಗೆ ಮರು ಆಯ್ಕೆಯಾದರು.
67 ವರ್ಷದ ಭರ್ತೃಹರಿ ಮಹತಾಬ್ ಲೋಕಸಭೆ ಚುನಾವಣೆಗೆ ಕಣಕ್ಕಿಳಿಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಸಂಸತ್ತಿನಲ್ಲಿ ಚರ್ಚೆಗಳಲ್ಲಿ ಅತ್ಯುತ್ತಮ ಪ್ರದರ್ಶನಕ್ಕಾಗಿ 2017 ರಿಂದ 2020 ರವರೆಗೆ ಸತತ ನಾಲ್ಕು ವರ್ಷಗಳ ಕಾಲ ಅವರಿಗೆ “ಸಂಸದ್ ರತ್ನ” ಪ್ರಶಸ್ತಿಯನ್ನು ನೀಡಲಾಯಿತು.