News Karnataka Kannada
Sunday, April 28 2024
ದೆಹಲಿ

ಕರ್ನಾಟಕ ಸೇರಿ ಮೂರು ರಾಜ್ಯಗಳಲ್ಲಿ ಬಿಪೊರ್‌ಜೋಯ್‌ ಅಬ್ಬರ: ಹವಾಮಾನ ಇಲಾಖೆ ಎಚ್ಚರಿಕೆ

Bipor Zoey to hit three states, including Karnataka: IMD
Photo Credit : IANS

ನವದೆಹಲಿ: ಗುಜರಾತ್, ಕೇರಳ, ಕರ್ನಾಟಕ ಮತ್ತು ಲಕ್ಷದ್ವೀಪ ಪ್ರದೇಶಗಳಲ್ಲಿ ಬಿಪೊರ್‌ಜೋಯ್‌’ ಚಂಡಮಾರುತ ಪರಿಣಾಮ ತೀವ್ರವಾಗಿರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಮುಂದಿನ 24 ಗಂಟೆಗಳಲ್ಲಿ ಚಂಡಮಾರುತ ಇನ್ನಷ್ಟು ಬಲ ಪಡೆದುಕೊಳ್ಳಲಿದೆ. ಉತ್ತರ-ಈಶಾನ್ಯಕ್ಕೆ ಚಲಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಶನಿವಾರ ತಿಳಿಸಿದೆ. ಚಂಡಮಾರುತವು ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರದ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆ ಮತ್ತು ಬಲವಾದ ಗಾಳಿಗೆ ಕಾರಣವಾಗಲಿದೆ ಎಂದು ಹೇಳಿದೆ.

ಗುಜರಾತ್, ಕೇರಳ, ಕರ್ನಾಟಕ ಮತ್ತು ಲಕ್ಷದ್ವೀಪ ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚಿಸಿದೆ. ಕೇರಳದ ಎಂಟು ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.

ಹೆಸರಿನ ವಿಶೇಷತೆ ಏನು: ಬಾಂಗ್ಲಾದೇಶವು ಚಂಡಮಾರುತಕ್ಕೆ ಬಿಪೊರ್ ಜಾಯ್ ಎಂದು ಹೆಸರಿಸಿದೆ. ಈ ಹೆಸರಿಗೆ ಬಂಗಾಳಿ ಭಾಷೆಯಲ್ಲಿ ವಿಪತ್ತು ಎಂಬ ಅರ್ಥವಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು