ದೆಹಲಿ: ಜಿ20 ಶೃಂಗಸಭೆಗಾಗಿ ದೆಹಲಿಗೆ ಆಗಮಿಸಿರುವ ಬ್ರಿಟನ್ ಪ್ರಧಾನಿ ರಿಷಿ ಸುನಕ್ ದಂಪತಿ ಇಂದು ಅಕ್ಷರಧಾಮಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ರಿಷಿ ದಂಪತಿ ಸುಮಾರು 45 ನಿಮಿಷಗಳ ಕಾಲ ದೇವಸ್ಥಾನದಲ್ಲಿಯೇ ಇರಲಿದ್ದಾರೆ, ಅಕ್ಷರಧಾಮಕ್ಕೆ ರಿಷಿ ಸುನಕ್ ಭೇಟಿಯನ್ನು ಗಮನದಲ್ಲಿಟ್ಟುಕೊಂಡು ದೆಹಲಿ ಪೊಲೀಸರು ದೇವಾಲಯದ ಆವರಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿಗಿ ಭದ್ರತೆ ಕಲ್ಪಿಸಿದ್ದಾರೆ.
ಈ ಪ್ರದೇಶಗಳಲ್ಲಿ ಬ್ಯಾರಿಕೇಡ್ಗಳನ್ನು ಅಳವಡಿಸಲಾಗಿದ್ದು, ಜಿ20 ಶೃಂಗಸಭೆಯ ದೃಷ್ಟಿಯಿಂದ ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದೇವಾಲಯದ ಸುತ್ತಲೂ ಭದ್ರತಾ ವ್ಯವಸ್ಥೆಗಳನ್ನು ಹೆಚ್ಚಿಸಲಾಗಿದ್ದು, ಹಲವಾರು ಪೊಲೀಸ್ ಅಧಿಕಾರಿಗಳನ್ನು ಅಲ್ಲಿ ನಿಯೋಜಿಸಲಾಗಿದೆ. ಶುಕ್ರವಾರ, ರಕ್ಷಾ ಬಂಧನವನ್ನು ಆಚರಿಸಿದೆವು, ಆದರೆ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಾಧ್ಯವಾಗಲಿಲ್ಲ ಹಾಗಾಗಿ ದೇವಸ್ಥಾನಕ್ಕೆ ಭೇಟಿ ನೀಡುತ್ತಿರುವುದಾಗಿ ರಿಷಿ ಸುನಕ್ ತಿಳಿಸಿದ್ದಾರೆ.
ಅಕ್ಷರಧಾಮ ದೇವಾಲಯವು ಸ್ವಾಮಿನಾರಾಯಣನ ದೇವಾಲಯವಾಗಿದೆ. ಇದು ಸಾಹಿತ್ಯಿಕ-ಸಾಂಸ್ಕೃತಿಕ ಸ್ಥಳವಾಗಿದೆ. ಈ ದೇವಾಲಯವನ್ನು ಸ್ವಾಮಿನಾರಾಯಣ ಅಕ್ಷರಧಾಮ ಎಂದೂ ಕರೆಯುತ್ತಾರೆ.