ನವದೆಹಲಿ: ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ವಿದೇಶಿ ನಾಯಕರಿಗೆ ಅಧಿಕೃತ ಆಹ್ವಾನ ಪತ್ರಿಕೆಯಲ್ಲಿ ಸಾಂಪ್ರದಾಯಿಕ ಇಂಡಿಯನ್ ಪ್ರೆಸಿಡೆಂಟ್ ಎಂಬ ಹೆಸರಿನ ಬದಲಿಗೆ ‘ಭಾರತದ ರಾಷ್ಟ್ರಪತಿ’ ಎಂದು ಬಳಸಿರುವುದಕ್ಕೆ ರಾಜಕೀಯ ಪಕ್ಷಗಳು ತೀಕ್ಷ್ಣ ಪ್ರತಿಕ್ರಿಯೆ ನೀಡಿವೆ.
ವಿರೋಧ ಪಕ್ಷದ ನಾಯಕರು ಈ ಕ್ರಮವನ್ನು ಟೀಕಿಸಿದ್ದಾರೆ. ಆದರೆ ದೇಶದ ಗೌರವ ಮತ್ತು ಹೆಮ್ಮೆಗೆ ಸಂಬಂಧಿಸಿದ ಪ್ರತಿಯೊಂದು ವಿಷಯಕ್ಕೂ ಏಕೆ ಪ್ರತಿಪಕ್ಷಗಳು ಆಕ್ಷೇಪಿಸುತ್ತವೆ” ಎಂದು ಬಿಜೆಪಿ ಪ್ರಶ್ನಿಸಿದೆ.
ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ವಿರೋಧ ಪಕ್ಷದ ಮೈತ್ರಿಕೂಟ ಇಂಡಿಯಾವನ್ನು ‘ಭಾರತ್’ ಎಂದು ಕರೆಯಲು ನಿರ್ಧರಿಸಿದರೆ ಆಡಳಿತ ಪಕ್ಷವು ದೇಶದ ಹೆಸರನ್ನು ‘ಬಿಜೆಪಿ’ ಎಂದು ಬದಲಾಯಿಸುತ್ತದೆಯೇ ಎಂದು ಪ್ರಶ್ನಿಸಿದ್ದಾರೆ. ದೇಶವು 140 ಕೋಟಿ ಜನರಿಗೆ ಸೇರಿದ್ದು, ಒಂದು ಪಕ್ಷಕ್ಕಲ್ಲ, ಮೈತ್ರಿಯ ಹೆಸರನ್ನು ಭಾರತ್ ಎಂದು ಬದಲಾಯಿಸಿದರೆ, ಅವರು ಭಾರತ್ ಹೆಸರನ್ನು ಬಿಜೆಪಿ ಎಂದು ಬದಲಾಯಿಸುತ್ತಾರೆಯೇ? ಎಂದು ವಾಗ್ದಾಳಿ ನಡೆಸಿದ್ದಾರೆ.