News Karnataka Kannada
Monday, May 13 2024
ದೆಹಲಿ

ಇಂದು ದೆಹಲಿಯಲ್ಲಿ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ

Cauvery River Water Management Authority to meet in Delhi today
Photo Credit : News Kannada

ನವದೆಹಲಿ: ಕರ್ನಾಟಕದಿಂದ ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ದೆಹಲಿಯಲ್ಲಿ ಮಧ್ಯಾಹ್ನ 2 ಗಂಟೆಗೆ ಸಿಡಬ್ಲ್ಯೂಎಂಎ ಕಚೇರಿಯಲ್ಲಿ ಸಭೆ ನಡೆಯಲಿದೆ.

ಈಗಾಗಲೇ ಕಳೆದ ಕೆಲವು ದಿನಗಳ ಹಿಂದೆ ನಡೆದ ಸಭೆಯಲ್ಲಿ ತಮಿಳುನಾಡಿಗೆ ನವೆಂಬರ್ ಒಂದರಿಂದ 15ರವರೆಗೆ 2600 ಕ್ಯುಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ CWMA ಆದೇಶ ನೀಡಿತ್ತು.

ಈ ಆದೇಶವನ್ನು ವಿರೋಧಿಸಿ ಮಂಡ್ಯದಲ್ಲಿ ರೈತ ಸಂಘಟನೆಗಳು ಪ್ರತಿಭಟನೆಯನ್ನು ನಡೆಸುತ್ತಿವೆ. ಪ್ರತಿಭಟನೆಯ ಬೆನ್ನಲ್ಲೇ ಸಿಡಬ್ಲ್ಯೂಎಂಎ ಮತ್ತೆ ತಮಿಳುನಾಡಿಗೆ ನೀರು ಹರಿಸಬೇಕು ಎಂದು ಕರ್ನಾಟಕಕ್ಕೆ ಮೇಲಿಂದ ಮೇಲೆ ಆದೇಶಗಳನ್ನು ನೀಡುತ್ತಲೇ ಇದೆ. ಅಲ್ಲದೆ ಇಂದು ನಡೆಯುವ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಕರ್ನಾಟಕಕ್ಕೆ ಸಿಡಬ್ಲ್ಯೂಎಂಎ ಏನು ಆದೇಶ ನೀಡುತ್ತದೆ ಎನ್ನುವತ್ತ ಎಲ್ಲರ ಚಿತ್ತನೆಟ್ಟಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು