ನವದೆಹಲಿ: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಡಿಕೆಶಿ ಕುಟುಂಬಕ್ಕೆ ನೋಟಿಸ್ ನೀಡಿರುವ ಸಿಬಿಐ, ಹೂಡಿಕೆ ಮಾಡಿರೋ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದೆ.
ಮಲೆಯಾಳಂ ಸುದ್ದಿ ವಾಹಿನಿ ಜೈ ಹಿಂದ್ ಎಂಡಿ ಬಿ.ಎಸ್ ಶಿಜುಗೆ ಸಿಬಿಐ ನೋಟಿಸ್ ಜಾರಿ ಮಾಡಿದೆ. ಈ ಸುದ್ದಿ ಸಂಸ್ಥೆಯಲ್ಲಿ ಡಿ.ಕೆ ಶಿವಕುಮಾರ್ ಕೂಡ ಹೂಡಿಕೆ ಮಾಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಎಂಡಿ ಬಿ.ಎಸ್ ಶಿಜುಗೆ ಚಾನೆಲ್ನಲ್ಲಿ ಹೂಡಿಕೆ ಮಾಡಿರುವ ಬಗ್ಗೆ ಮಾಹಿತಿ ನೀಡುವಂತೆ CRPC ಸೆಕ್ಷನ್ 91ರ ಅಡಿಯಲ್ಲಿ ನೋಟಿಸ್ ನೀಡಲಾಗಿದೆ. ಈ ನೋಟಿಸ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ಎಂಡಿ ಬಿ.ಎಸ್ ಶಿಜು ಅವರು ಜನವರಿ 11ಕ್ಕೆ ಸಿಬಿಐ ವಿಚಾರಣೆಗೆ ಹಾಜರಾಗಬೇಕಿದೆ.
2013-18ರ ಅವಧಿಯ ಸಿಬಿಐ ಪ್ರಕರಣದ ಇದಾಗಿದ್ದು, ಜೈ ಹಿಂದ್ ಸಂಸ್ಥೆಯ ಎಂಡಿ ಶಿಜು ಅವರಿಗೆ ನೋಟಿಸ್ ನೀಡಲಾಗಿದೆ. ಈ ಬಗ್ಗೆ ನಾವು ಕಾನೂನು ಹೋರಾಟ ಮಾಡುತ್ತೆೇವೆ ಎಂದು ಶಿಜು ಅವರು ಹೇಳಿದ್ದಾರೆ. ಇದೇ ಪ್ರಕರಣದಲ್ಲಿ ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ ಕುಟುಂಬಕ್ಕೂ ಸಿಬಿಐ ನೋಟಿಸ್ ನೀಡಿದೆ ಎನ್ನಲಾಗಿದೆ.
ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್ ರಿಲೀಸ್ ಆಗಿದೆ. ಸಿನಿಮಾದ ತೆರೆ ಹಿಂದಿನ ಗ್ಲಿಂಪ್ಸ್ ಇದಾಗಿದೆ.…
ಕರ್ನಾಟಕದ ವಾಣಿಜ್ಯ ನಗರಿ ಎಂದೇ ಪ್ರಸಿದ್ಧಿ ಪಡೆದ ಜಿಲ್ಲೆ ಧಾರವಾಡ. ಬಾಯಿ ನೀರೂರಿಸುವ ಧಾರವಾಡ ಪೇಡಾಕ್ಕೆ ಧಾರವಾಡವಲ್ಲದೆ ಬೇರೆ ಸಾಟಿಯಿಲ್ಲ,…
ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅಪರಿಚಿತ ವ್ಯಕ್ತಿಗಳ ಶವದ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ಗೌರಯುತವಾಗಿ ನಡೆಸಲಾಯಿತು.
ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇಬ್ಬರು ಹೆಂತಿಯರು ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು…
ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್ಗಳಿಂದ…