News Karnataka Kannada
Sunday, April 28 2024
ದೆಹಲಿ

ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿವಾಸದ ಮೇಲೆ ತನಿಖಾ ದಳ ದಾಳಿ

ಜಮ್ಮು ಮತ್ತು ಕಾಶ್ಮೀರದ  ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್  ಅವರ ನಿವಾಸ, ಕಚೇರಿ ಮೇಲೆ ಕೇಂದ್ರೀಯ ತನಿಖಾ ದಳ ದಾಳಿ ನಡೆಸಿದೆ.
Photo Credit : News Kannada

ನವದೆಹಲಿ:  ಜಮ್ಮು ಮತ್ತು ಕಾಶ್ಮೀರದ  ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್  ಅವರ ನಿವಾಸ, ಕಚೇರಿ ಮೇಲೆ ಕೇಂದ್ರೀಯ ತನಿಖಾ ದಳ ದಾಳಿ ನಡೆಸಿದೆ.

ಕಿರು ಜಲವಿದ್ಯುತ್ ಯೋಜನೆಯಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಿಬಿಐ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ. ಸತ್ಯಪಾಲ್ ಮಲಿಕ್ ಅವರು ಆಗಸ್ಟ್ 2018 ರಿಂದ ಅಕ್ಟೋಬರ್ 2019 ರವರೆಗೆ ಹಿಂದಿನ ಜಮ್ಮು ಮತ್ತು ಕಾಶ್ಮೀರದ 10ನೇ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು.

ಕಳೆದ 3-4 ದಿನಗಳಿಂದ ನಾನು ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದೇನೆ. ಇಷ್ಟೆಲ್ಲಾ ಆದರೂ ಸರ್ಕಾರಿ ಸಂಸ್ಥೆಗಳ ಮೂಲಕ ನನ್ನ ಮನೆ ಮೇಲೆ ದಾಳಿ ನಡೆಸಲಾಗಿದೆ. ನನ್ನ ಚಾಲಕ ಮತ್ತು ನನ್ನ ಸಹಾಯಕರ ಮೇಲೂ ದಾಳಿ ಮಾಡಿ ಅನಗತ್ಯವಾಗಿ ಕಿರುಕುಳ ನೀಡಲಾಗುತ್ತಿದೆ ಎಂದು ಮಲಿಕ್‌ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕಿರು ಹೈಡ್ರೊ ಎಲೆಕ್ಟ್ರಿಕ್ ಪವರ್ ಪ್ರಾಜೆಕ್ಟ್ (ಎಚ್‌ಇಪಿ) ಯ ಅಂದಾಜು 2,200 ಕೋಟಿ ರೂಪಾಯಿ ಮೌಲ್ಯದ ಸಿವಿಲ್ ಕಾಮಗಾರಿಯ ಗುತ್ತಿಗೆಯನ್ನು 2019 ರಲ್ಲಿ ಖಾಸಗಿ ಕಂಪನಿಗೆ ನೀಡುವಲ್ಲಿ ಅವ್ಯವಹಾರ ನಡೆದಿದೆ. ಇ ಮಾರ್ಗಸೂಚಿಗಳನ್ನು ಅನುಸರಿಸದೇ ಗುತ್ತಿಗೆ ನೀಡಲಾಗಿದೆ ಎಂದು ಆರೋಪಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಸತ್ಯಪಾಲ್‌ ಮಲಿಕ್‌ ರಾಜ್ಯಪಾಲರಾಗಿದ್ದ ಸಂದರ್ಭದಲ್ಲಿ ಈ ಯೋಜನೆಗೆ ಸಂಬಂಧಿಸಿದಂತೆ ಎರಡು ಕಡತಗಳನ್ನು ತೆರವುಗೊಳಿಸಲು 300 ಕೋಟಿ ರೂ. ಲಂಚ ಪಡೆದಿರುವ ಆರೋಪವನ್ನು ಎದುರಿಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು