ನವದೆಹಲಿ: ಈ ಹಿಂದಿನ ಚುನಾವಣೆಯ ಸಂದರ್ಭದಲ್ಲಿ ಸಿಎಎ ಜಾರಿಗೊಳಿಸುತ್ತೇವೆ ಎಂದು ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಪ್ರಕಟಿಸಿತ್ತು. ರಾಷ್ಟ್ರ ಪತಿಗಳು ಕಾಯ್ದೆಗೆ ಸಹಿ ಹಾಕಿದ್ದರೂ ಇಲ್ಲಿಯವರೆಗೆ ಜಾರಿ ಆಗಿರಲಿಲ್ಲ.
ಇದೀಗ ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಭಾರತದದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಅಧಿಸೂಚನೆ ಹೊರಡಿಸಿದೆ. ಈ ಮೂಲಕ ದೇಶಾದ್ಯಂತ ಸಿಎಎ ಪೌರತ್ವ ಕಾಯ್ದೆಯ ನಿಯಮಗಳ ಅಧಿಸೂಚನೆ ಹೊರಬಿದ್ದಿದೆ.
ಈ ಕಾಯ್ದೆಯ ಪ್ರಕಾರ ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾದೇಶಗಳಿಂದ ಬರುವ ಹಿಂದೂ, ಸಿಖ್, ಜೈನ್, ಕ್ರೈಸ್ತ ಮತ್ತು ಬೌದ್ಧ ಸಮುದಾಯದವರಿಗೆ ಭಾರತದ ಪೌರತ್ವ ನೀಡಲಾಗುತ್ತದೆ.
2019ರಲ್ಲಿ ಸಂಸತ್ತಿನಲ್ಲಿ ಸಿಎಎ ಕಾಯ್ದೆಗೆ ಅನುಮೋದನೆ ಸಿಕ್ಕರೂ, ಅಧಿಸೂಚನೆ ಹೊರಡಿಸಿರಲಿಲ್ಲ. ಈ ಹಿಂದೆ ನೀಡಿದ್ದ ಭರವಸೆಯಂತೆ ಸಿಎಎ ಜಾರಿಗೊಳಿಸಿದೆ.