ನವದೆಹಲಿ: ಭಾರತದ ಮಾಜಿ ಪ್ರಧಾನಿಗಳಾದ ನರಸಿಂಹರಾವ್, ಚೌಧರಿ ಚರಣ್ ಸಿಂಗ್ ಮತ್ತು ಎಂಎಸ್ ಸ್ವಾಮಿನಾಥನ್ ಅವರಿಗೆ ಭಾರತ ರತ್ನ ಪ್ರಶಸ್ತಿಯನ್ನು ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಸೋಷಿಯಲ್ ಮೀಡಿಯಾಎಕ್ಸ್ ನಲ್ಲಿ ಟ್ವೀಟ್ ಮಾಡುವ ಮೂಲಕ ಭಾರತ ರತ್ನ ಪ್ರಶಸ್ತಿಗೆ ಆಯ್ಕೆಯಾದವರ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಡಿಸೆಂಬರ್ 23, 1902 ರಂದು ಜನಿಸಿದ ಚೌಧರಿ ಚರಣ್ ಸಿಂಗ್, ಜುಲೈ 1979 ರಿಂದ ಜನವರಿ 1980 ರವರೆಗೆ ದೇಶದ ಐದನೇ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು ಹಾಗೂ ಒಬ್ಬ ಗಮನಾರ್ಹ ಭಾರತೀಯ ರಾಜಕೀಯ ನಾಯಕರಾಗಿದ್ದರು. ಕೃಷಿ ಸುಧಾರಣೆ ಕಾರ್ಯಗಳನ್ನು ಆರಂಭಿಸಿದರು ಮತ್ತು ರೈತರ ಹಕ್ಕುಗಳಿಗೆ ಹೆಚ್ಚು ಪ್ರಾಮುಖ್ಯತೆ ನೀಡಿದರು. ಗ್ರಾಮೀಣ ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯಕ್ಕೆ ಹೆಚ್ಚು ಒತ್ತು ನೀಡಿದರು. ಅವರು ಮೇ 29, 1987 ರಂದು ನಿಧನ ಹೊಂದಿದರು.
हमारी सरकार का यह सौभाग्य है कि देश के पूर्व प्रधानमंत्री चौधरी चरण सिंह जी को भारत रत्न से सम्मानित किया जा रहा है। यह सम्मान देश के लिए उनके अतुलनीय योगदान को समर्पित है। उन्होंने किसानों के अधिकार और उनके कल्याण के लिए अपना पूरा जीवन समर्पित कर दिया था। उत्तर प्रदेश के… pic.twitter.com/gB5LhaRkIv
— Narendra Modi (@narendramodi) February 9, 2024
ಎಂಎಸ್ ಸ್ವಾಮಿನಾಥನ್, ಆಗಸ್ಟ್ 7, 1925 ರಂದು ತಮಿಳುನಾಡಿನಲ್ಲಿ ಜನಿಸಿದರು, ಪ್ರಧಾನಿಯಾದರ ಸಂದರ್ಭದಲ್ಲಿ ಅವರು ಹಸಿರು ಕ್ರಾಂತಿಗೆ ಹೆಚ್ಚು ಪ್ರಾಮುಖ್ಯತೆಯನ್ನು ನೀಡಿದರು. ಇವರು ಒಬ್ಬ ಪ್ರಸಿದ್ಧ ಭಾರತೀಯ ಕೃಷಿ ವಿಜ್ಞಾನಿ. ಹೆಚ್ಚು ಇಳುವರಿ ನೀಡುವ ಗೋಧಿ ತಳಿಗಳ ಕುರಿತು ಅವರ ಅದ್ಭುತ ಸಂಶೋಧನೆಯನ್ನು ನಡೆಸಿದರು. ಈ ಸಂಶೋಧನೆ 1960 ಮತ್ತು 1970 ರ ದಶಕದಲ್ಲಿ ಭಾರತದಲ್ಲಿ ಕೃಷಿ ಉತ್ಪಾದಕತೆಯನ್ನು ಪರಿವರ್ತಿಸಿತು, ಇದರಿಂದ ದೇಶದ ಆಹಾರದ ಕೊರತೆಯನ್ನು ನಿವಾರಿಸಿತು.
ಸುಸ್ಥಿರ ಕೃಷಿ ಪದ್ಧತಿಗಾಗಿ ಸ್ವಾಮಿನಾಥನ್ ಅವರಿಗೆ ವಿಶ್ವ ಆಹಾರ ಪ್ರಶಸ್ತಿ ಮತ್ತು ಪದ್ಮವಿಭೂಷಣದಂತಹ ಪ್ರತಿಷ್ಠಿತ ಪ್ರಶಸ್ತಿಗಳನ್ನು ಪಡೆದಿದರು. ಆಹಾರ ಭದ್ರತೆ ಮತ್ತು ಸುಸ್ಥಿರ ಕೃಷಿಯನ್ನು ಉತ್ತೇಜಿಸುವಲ್ಲಿ ವಿಶ್ವಾದ್ಯಂತ ವಿಜ್ಞಾನಿಗಳು ಮತ್ತು ನೀತಿ ನಿರೂಪಕರಿಗೆ ಅವರ ಕೆಲಸವು ಸ್ಫೂರ್ತಿಯಾಗಿತ್ತು.
It is a matter of immense joy that the Government of India is conferring the Bharat Ratna on Dr. MS Swaminathan Ji, in recognition of his monumental contributions to our nation in agriculture and farmers’ welfare. He played a pivotal role in helping India achieve self-reliance in… pic.twitter.com/OyxFxPeQjZ
— Narendra Modi (@narendramodi) February 9, 2024
ಪಾಮುಲಪರ್ತಿ ವೆಂಕಟ ನರಸಿಂಹ ರಾವ್ ಅವರು 1991 ರಿಂದ 1996 ರವರೆಗೆ ಭಾರತದ ಒಂಬತ್ತನೇ ಪ್ರಧಾನ ಮಂತ್ರಿಯಾಗಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಜೂನ್ 28, 1921 ರಂದು ಜನಿಸಿದ ರಾವ್ ಅವರು ತಮ್ಮ ಅಧಿಕಾರಾವಧಿಯಲ್ಲಿ ಉದಾರೀಕರಣ ಮತ್ತು ಜಾಗತೀಕರಣ ಕ್ರಮಗಳನ್ನು ಒಳಗೊಂಡಂತೆ ಗಮನಾರ್ಹ ಆರ್ಥಿಕ ಸುಧಾರಣೆಗಳನ್ನು ಪ್ರಾರಂಭಿಸಿದರು. ರಾಜಕೀಯ ಸವಾಲುಗಳ ಹೊರತಾಗಿಯೂ ಕೆಲಸಗಳನ್ನು ಮಾಡಿದ್ದಾರೆ. ಮತ್ತು ನೆರೆಯ ದೇಶಗಳೊಂದಿಗೆ ರಾಜತಾಂತ್ರಿಕ ಪ್ರಸ್ತಾಪಗಳನ್ನು ಪ್ರಾರಂಭಿಸಿದ ಗೌರವ ಇವರಿಗೆ ಸಲ್ಲುತ್ತದೆ. ಭಾರತದ ಆರ್ಥಿಕ ಪರಿವರ್ತನೆ ಮತ್ತು ರಾಜಕೀಯ ಬದಲಾವಣೆಗೆ ರಾವ್ ಅವರ ಕೊಡುಗೆ ಅಪಾರ ಒಬ್ಬ ಸುಧಾರಕ ರಾಜಕಾರಣಿಯಾಗಿ ಸೇವೆ ಸಲ್ಲಿಸಿದ್ದಾರೆ. ಅವರು ಡಿಸೆಂಬರ್ 23, 2004 ರಂದು ನಿಧನರಾದರು.
Delighted to share that our former Prime Minister, Shri PV Narasimha Rao Garu, will be honoured with the Bharat Ratna.
As a distinguished scholar and statesman, Narasimha Rao Garu served India extensively in various capacities. He is equally remembered for the work he did as… pic.twitter.com/lihdk2BzDU
— Narendra Modi (@narendramodi) February 9, 2024