ನವದೆಹಲಿ: ಇತ್ತೀಚಿನ ದಿನಗಳಲ್ಲಿ ನಗದು ವ್ಯವಹಾರಗಳ ಸಂಖ್ಯೆ ಗಣನೀಯವಾಗಿ ಇಳಿಮುಖವಾಗುತ್ತಿದೆ. ಪ್ರತಿ ವ್ಯಾಪಾರ, ವ್ಯವಹಾರಕ್ಕೆ ಜನರು ನೋಟುಗಳ ಬದಲಿಗೆ ಪೋನ್ ಪೇ, ಗೂಗಲ್ ಪೇ ನಂತಹ ಯುಪಿಐ ಆಧಾರಿತ ತಂತ್ರಜ್ಞಾನವನ್ನೇ ಬಳಸುತ್ತಿದ್ದಾರೆ.
ಜರ್ಮನಿಯ ಸಚಿವರೊಬ್ಬರು ಬೆಂಗಳೂರಿನಲ್ಲಿ ಯುಪಿಐ ಬಳಸಿ ತರಕಾರಿ ಖರೀದಿಸಿದ್ದು, ಭಾರತದಲ್ಲಿ ತಂತ್ರಜ್ಞಾನ ಕ್ರಾಂತಿಯ ಪರಿ ನೋಡಿ ಎಂದು ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಸಹಿತ ಸಂದೇಶವೊಂದನ್ನು ಹಂಚಿಕೊಂಡಿದ್ದರು. ಅದೇ ರೀತಿ ಸಾಂಪ್ರದಾಯಿಕ ವ್ಯಾಪಾರ ವಹಿವಾಟಿಗೆ ನೋಟುಗಳ ಬಳಕೆ ಬದಲಿಗೆ ತಂತ್ರಜ್ಞಾನ ಆಧಾರಿತ ಯುಪಿಐ ಪಾವತಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.
ಇದೀಗ ಯುಪಿಐ ಬಳಸಿ ಎಟಿಎಂನಿಂದ ಹಣ ಪಡೆಯುವ ವಿಧಾನವನ್ನು ಸರಳೀಕರಿಸಿದ್ದು, ಇದನ್ನು ದೇಶದ ಮೊದಲ ಯುಪಿಐ ಎಟಿಎಂ ಎಂದು ಕರೆಯಲಾಗಿದೆ. ಈ ತಂತ್ರಜ್ಞಾನದಿಂದಾಗಿ ಬೌದ್ಧಿಕ ಎಟಿಎಂ ಕಾರ್ಡ್ ತೆಗೆದುಕೊಂಡು ಹೋಗುವ ಜರೂರು ಇಲ್ಲ. ಹೀಗಾಗಿ ಇದೊಂದು ಕ್ರಾಂತಿಕಾರಕ ಬದಲಾವಣೆ ಎಂದು ಅಂತರ್ಜಾಲ ಬಳಕೆದಾರರು ಹೇಳಿದ್ದಾರೆ. ಈ ನೂತನ ಸಾಧನದ ವಿಡಿಯೊ ತುಣಕನ್ನು ಕೇಂದ್ರ ಸಚಿವ ಪಿಯೂಷ್ ಗೋಯಲ್ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಫಿನ್ಟೆಕ್ ಇನ್ಫ್ಲುಯೆನ್ಸರ್ ಅನ್ನು ಬಳಸಿ ಹಣ ಪಡೆಯುವ ಪ್ರಕ್ರಿಯೆಯನ್ನು ರವಿಸುತಂಜನಿ ಎಂಬುವವರು ವಿಡಿಯೊ ಮೂಲಕ ತೋರಿಸಿದ್ದಾರೆ.
ಆಮ್ ಆದ್ಮಿ ಪಕ್ಷಕ್ಕೆ ವಿದೇಶಿ ಮೂಲಗಳಿಂದ 7 ಕೋಟಿ ರೂ.ಗೂ ಹೆಚ್ಚು ದೇಣಿಗೆ ಸಿಕ್ಕಿರುವ ಬಗ್ಗೆ ಎಫ್ಸಿಆರ್ಎ ತನಿಖೆಯನ್ನು ಕೋರಿ…
ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗ…
ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರದ…
ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…
ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…
ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…