News Karnataka Kannada
Friday, May 03 2024
ದೆಹಲಿ

ದೆಹಲಿ: ವಿಧಾನಸಭೆಯಲ್ಲಿ ಇಂದು ವಿಶ್ವಾಸ ಮತ ಯಾಚಿಸಲಿರುವ ಸಿಎಂ ಅರವಿಂದ ಕೇಜ್ರಿವಾಲ್

400 new mohalla clinics to be set up in Punjab
Photo Credit : IANS

ದೆಹಲಿ: ವಿಪಕ್ಷಗಳಿಗೆ ಸೆಡ್ಡು ಹೊಡೆದಿರುವ ದೆಹಲಿ ಆಡಳಿತರೂಢ ಪಕ್ಷ ಆಮ್ ಆದ್ಮಿ ಸಂಚಾಲಕರೂ ಆಗಿರುವ ಅರವಿಂದ್ ಕೇಜ್ರಿವಾಲ್ ಅವರು ಇಂದು (ಆ.29) ವಿಶ್ವಾಸ ಮತಯಾಚನೆ ಮಾಡಲಿದ್ದಾರೆ.

ಇಂದು ಬೆಳಗ್ಗೆ 11 ಗಂಟೆಗೆ ಆರಂಭಗೊಳ್ಳಲಿರುವ ವಿಧಾನಸಭೆ ಅಧಿವೇಶನದಲ್ಲಿ ಆಮ್​ ಆದ್ಮಿ ಪಕ್ಷ ವಿಶ್ವಾಸ ನಿರ್ಣಯವನ್ನು ಮಂಡಿಸಲಿದೆ. ಬಿಜೆಪಿ ಪಕ್ಷವು ಪಕ್ಷದ ಯಾವುದೇ ಶಾಸಕರನ್ನು ಸೆಳೆಯಲು ವಿಫಲವಾಗಿದೆ ಎಂಬೂದನ್ನು ಸಾಬೀತುಪಡಿಸಲು ಆಮ್​ ಆದ್ಮಿ ಪಕ್ಷ ಈ ನಿರ್ಧಾರ ಕೈಗೊಂಡಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶುಕ್ರವಾರ ವಿಧಾನಸಭೆಯಲ್ಲಿ ಭಾಷಣ ಮಾಡುತ್ತಾ, ನಮ್ಮ ಪಕ್ಷದ ಶಾಸಕರನ್ನು ಸೆಳೆಯುವಲ್ಲಿ ಬಿಜೆಪಿ ವಿಫಲವಾಗಿದೆ ಎಂದು ದೆಹಲಿ ನಿವಾಸಿಗಳಿಗೆ ಸಾಬೀತುಪಡಿಸಲು ಸದನದಲ್ಲಿ ‘ವಿಶ್ವಾಸ ನಿರ್ಣಯ’ ತರುವುದಾಗಿ ಹೇಳಿದರು.

ಆದರೆ ಎಎಪಿಗೆ ಜಾಟಿ ಬೀಸಿದ ವಿರೋಧ ಪಕ್ಷ ಬಿಜೆಪಿ, ದೆಹಲಿಯ ಆಡಳಿತ ಪಕ್ಷವು ಸಿಬಿಐ ತನಿಖೆಯಲ್ಲಿರುವ ಅಬಕಾರಿ ನೀತಿಯ ಪ್ರಶ್ನೆಗಳಿಗೆ ಪ್ರತಿಕ್ರಿಯಿಸುವ ಬದಲು ಗಮನವನ್ನು ಬೇರೆಡೆಗೆ ಸೆಳೆಯುವ ಪ್ರಯತ್ನ ನಡೆಸುತ್ತಿದೆ ಎಂದು ಹೇಳಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು