ನವದೆಹಲಿ: ಮೈಸೂರು ದಸರಾ ಕಾರ್ಯಕ್ರಮದಲ್ಲಿ ವಿಶೇಷ ಏರ್ ಶೋ ನಡೆಸುವಂತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ದೆಹಲಿಯ ಸಂಸತ್ ಭವನದಲ್ಲಿರುವ ರಾಜನಾಥ್ ಸಿಂಗ್ ಕಚೇರಿಯಲ್ಲಿ ಭೇಟಿಯಾಗಿ ಈ ಸಂಬಂಧ ಮಾತುಕತೆ ನಡೆಸಿದರು.
ಮೈಸೂರು ದಸರಾ ರಾಜ್ಯದ ಗತವೈಭವ ಮತ್ತು ಇತಿಹಾಸವನ್ನು ಸಾರುವ ಹಬ್ಬವಾಗಿದೆ. ಇದನ್ನು ನೋಡಲು ಲಕ್ಷಾಂತರ ಪ್ರವಾಸಿಗರು ರಾಜ್ಯಕ್ಕೆ ಆಗಮಿಸುತ್ತಾರೆ. ಈ ವರ್ಷವೂ ಅಕ್ಟೋಬರ್ 15-24 ರವರೆಗೂ ಅಚರಿಸಲು ನಿರ್ಧರಿಸಿದೆ.
2017 ಮತ್ತು 2019 ರಲ್ಲಿ ಟಾರ್ಚ್ ಲೈಟ್ ಪರೇಡ್ ಮೈದಾನದಲ್ಲಿ ವಾಯುಪಡೆ ವಿಶೇಷ ಏರ್ ಶೋ ನಡೆಸಿತ್ತು. ಬಹಳಷ್ಟು ಜನರು ಇದನ್ನು ನೋಡಿ ಇಷ್ಟಪಟ್ಟಿದ್ದರು. ಈ ವರ್ಷವೂ ವಾಯುಪಡೆಗಳಿಂದ ವಿಶೇಷ ಏರ್ ಶೋ ನಡೆಸಲು ನಿರ್ದೇಶಿಸಬೇಕು ಎಂದು ಮನವಿ ಮಾಡಿದರು. ಮನವಿ ಸ್ವೀಕರಿಸಿದ ರಾಮನಾಥ್ ಸಿಂಗ್ ಈ ಬಗ್ಗೆ ಪರಿಶೀಲನೆ ನಡೆಸುವುದಾಗಿ ಹೇಳಿದರು.