ನವದೆಹಲಿ: ಡಿ.19ರಂದು ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೇಟಿಯಾಗಲು ಅವಕಾಶ ನೀಡಲಾಗಿದೆ. ಬೆಳಗ್ಗೆ 11 ಗಂಟೆಗೆ ಸಂಸತ್ನಲ್ಲಿ ಮೋದಿ ಭೇಟಿಗೆ ಸಮಯ ನಿಗದಿ ಮಾಡಲಾಗಿದೆ.
ಎರಡನೇ ಬಾರಿ ಮುಖ್ಯಮಂತ್ರಿಯಾದ ನಂತರ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗುತ್ತಿರುವ ಎರಡನೇ ಭೇಟಿ ಇದಾಗಿದೆ.
ನಾಳೆ ಸಂಸತ್ ಭವನದಲ್ಲಿ ಮೋದಿ ಅವರನ್ನು ಭೇಟಿಯಲಿರುವ ಸಿದ್ದರಾಮಯ್ಯ ಅವರು ರಾಜ್ಯದಲ್ಲಿನ ಬರಗಾಲದ ಕುರಿತು ಚರ್ಚಿಸುವ ಸಾಧ್ಯತೆ ಇದೆ. ಇದೇ ವೇಳೆ ಬರ ಪರಿಹಾರವನ್ನು ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸುವ ಸಾಧ್ಯತೆ ಇದೆ.
ಪ್ರಧಾನಿ ಮೋದಿ ಅವರನ್ನು ಆಗಸ್ಟ್ 3 ರಂದು ಸಿದ್ದರಾಮಯ್ಯ ಅವರು ಭೇಟಿಯಾಗಿ ವಿಶೇಷ ಕೊಡುಗೆ ನೀಡಿದ್ದರು. ಆದರೆ, ಸಚಿವ ಎಂಬಿ ಪಾಟೀಲ್ ಅವರು ವರ್ಷಾನುಗಟ್ಟಲೆಯಿಂದ ಅವಕಾಶ ಕೊಟ್ಟಿರಲಿಲ್ಲ ಎಂದು ಆರೋಪಿಸಿದ್ದಾರೆ.