News Karnataka Kannada
Friday, May 17 2024
ದೆಹಲಿ

ಕಾಂಗ್ರೆಸ್‌ ಲೋಕಸಭೆ ಚುನಾವಣೆಗೆ 25 ಗ್ಯಾರಂಟಿ ಘೋಷಣೆ

ಕಾಂಗ್ರೆಸ್‌ ಪಕ್ಷವು ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸುವ ದೃಷ್ಟಿಯಿಂದ ಕರ್ನಾಟಕ ಹಾಗೂ ತೆಲಂಗಾಣದಲ್ಲಿ ಉಚಿತ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದೆ.
Photo Credit : NewsKarnataka

ನವದೆಹಲಿ: ಕಾಂಗ್ರೆಸ್‌ ಪಕ್ಷವು ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸುವ ದೃಷ್ಟಿಯಿಂದ ಕರ್ನಾಟಕ ಹಾಗೂ ತೆಲಂಗಾಣದಲ್ಲಿ ಉಚಿತ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದೆ.

ಕಾಂಗ್ರೆಸ್‌ ದೇಶದ ಜನರಿಗೆ 25 ಗ್ಯಾರಂಟಿಗಳನ್ನು ಘೋಷಿಸಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಘರ್‌ ಘರ್‌ ಗ್ಯಾರಂಟಿ ಎಂಬ ಅಭಿಯಾನವನ್ನು ಈಶಾನ್ಯ ದೆಹಲಿ ಲೋಕಸಭೆ ಕ್ಷೇತ್ರದಿಂದ ಆರಂಭಿಸಿದ್ದಾರೆ.

ಕಾಂಗ್ರೆಸ್‌ ಸುಮಾರು 8 ಭಾಷೆಗಳಲ್ಲಿ ಗ್ಯಾರಂಟಿ ಕಾರ್ಡ್‌ಗಳನ್ನು ಮುದ್ರಿಸಿದ್ದು, ಪಕ್ಷದ ಕಾರ್ಯಕರ್ತರು ದೇಶಾದ್ಯಂತ 8 ಕೋಟಿಗೂ ಅಧಿಕ ಕುಟುಂಬಗಳಿಗೆ ಕಾರ್ಡ್‌ಗಳನ್ನು ವಿತರಣೆ ಮಾಡಲಿದ್ದಾರೆ ಎಂಬುದಾಗಿ ಕಾಂಗ್ರೆಸ್‌ ಮಾಹಿತಿ ನೀಡಿದೆ. ಪ್ರಮುಖ ಐದು ಗ್ಯಾರಂಟಿಗನ್ನು ಘೋಷಣೆ ಮಾಡಿದ್ದು, ಒಂದೊಂದು ಗ್ಯಾರಂಟಿಯೂ ಐದೈದು ಭರವಸೆಗಳನ್ನು ಒಳಗೊಂಡಿದೆ. ಆ ಮೂಲಕ ಲೋಕಸಭೆ ಚುನಾವಣೆಯಲ್ಲೂ ಉಚಿತ ಗ್ಯಾರಂಟಿಗಳ ಮೂಲಕ ಜನರ ವಿಶ್ವಾಸ, ಮತ ಗಳಿಸಲು ಕಾಂಗ್ರೆಸ್‌ ಮುಂದಾಗಿದೆ.

1. ಯುವ ನ್ಯಾಯ: ಶಿಕ್ಷಣ ಪಡೆದ ಯುವಜನತೆಗೆ ವಾರ್ಷಿಕ 1 ಲಕ್ಷ ರೂ. ಅಪ್ರೆಂಟಿಸ್‌ಶಿಪ್‌, 30 ಲಕ್ಷ ಉದ್ಯೋಗ ಸೃಷ್ಟಿ, ಪ್ರಶ್ನೆಪತ್ರಿಕೆ ತಡೆಗೆ ಎಲ್ಲ ರೀತಿಯ ಕ್ರಮ, ಗುತ್ತಿಗೆ ಆಧಾರಿತ ಉದ್ಯೋಗಿಗಳ ರಕ್ಷಣೆ,
ಯುವಕರಿಗೆ 5 ಸಾವಿರ ರೂ. ಸ್ಟಾರ್ಟಪ್‌ ಫಂಡ್

2. ನಾರಿ ನ್ಯಾಯ: ಬಡಕುಟುಂಬದ ಒಬ್ಬ ಮಹಿಳೆಗೆ ವಾರ್ಷಿಕ 1 ಲಕ್ಷ ರೂ. ನೆರವು, ಕೇಂದ್ರ ಸರ್ಕಾರದ ಉದ್ಯೋಗಗಳಲ್ಲಿ ಸ್ತ್ರೀಯರಿಗೆ ಶೇ.50ರಷ್ಟು ಮೀಸಲಾತಿ, ಆಶಾ, ಬಿಸಿಯೂಟ ಕಾರ್ಯಕರ್ತೆಯರ ಸಂಬಳ ದ್ವಿಗುಣ, ಗ್ರಾಮೀಣ ಭಾಗದ ಮಹಿಳಾ ಕಾರ್ಮಿಕರಿಗೆ ಕಾನೂನು ನೆರವು, ಮಹಿಳಾ ಕಾರ್ಮಿಕರ ಹಾಸ್ಟೆಲ್‌ಗಳನ್ನು ಎರಡು ಪಟ್ಟು ಹೆಚ್ಚಿಸುವುದು.

3. ಕಿಸಾನ್‌ ನ್ಯಾಯ : ಎಂ.ಎಸ್.ಸ್ವಾಮಿನಾಥನ್‌ ಆಯೋಗದ ಶಿಫಾರಿಸನಂತೆ ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯ ಕಾನೂನು, ರೈತರ ಸಾಲ ಮನ್ನಾ ಮಾಡಲು ಶಾಶ್ವತ ಆಯೋಗ ರಚನೆ,
ಬೆಳೆ ವಿಮೆ ಹಣವನ್ನು 30 ದಿನಗಳಲ್ಲಿ ನೇರವಾಗಿ ರೈತರ ಖಾತೆಗಳಿಗೆ ವರ್ಗಾವಣೆ ಮಾಡಲಾಗುವುದು, ರೈತರ ಸ್ನೇಹಿಯಾಗಿ ಕೃಷಿ ರಫ್ತು ನೀತಿ ರೂಪಿಸುವುದು, ಕೃಷಿ ಸಲಕರಣೆಗಳಿಗೆ ಜಿಎಸ್‌ಟಿಯಿಂದ ಮುಕ್ತಿ

4. ಶ್ರಮಿಕ ನ್ಯಾಯ: ನರೇಗಾ ದಿನಗೂಲಿ ಕಾರ್ಮಕರ ದಿನಗೂಲಿ 400 ರೂ.ಗೆ ಏರಿಕೆ, ಪ್ರತಿಯೊಬ್ಬರಿಗೂ 25 ಲಕ್ಷ ರೂ.ವರೆಗೆ ಆರೋಗ್ಯ ವಿಮೆ, ನರೇಗಾ ರೀತಿ ನಗರಗಳಲ್ಲೂ ಉದ್ಯೋಗ ಖಾತ್ರಿ ಯೋಜನೆ,
ಅಸಂಘಟಿತ ಕಾರ್ಮಿಕರಿಗೆ ಜೀವ ವಿಮೆ, ಸರ್ಕಾರಿ ನೌಕರರಿಗೆ ರಕ್ಷಣೆ, ಪಾರದರ್ಶಕತೆಗೆ ಆದ್ಯತೆ

5. ಸಮಾನತೆಯ ನ್ಯಾಯ: ಸಾಮಾಜಿಕ ಹಾಗೂ ಆರ್ಥಿಕ ಸಮಾನತೆಗಾಗಿ ದೇಶಾದ್ಯಂತ ಜಾತಿ ಗಣತಿ, ಎಸ್‌ಸಿ, ಎಸ್‌ಟಿ, ಒಬಿಸಿ ಮೀಸಲಾತಿಯ ಶೇ.50ರ ಮತಿ ತೆಗೆದು ಹಾಕಲಾಗುವುದು, ಎಸ್‌ಸಿ, ಎಸ್‌ಟಿಯವರಿಗೆ ವಿಶೇಷ ಬಜೆಟ್‌ ಮಂಡನೆ, ಅರಣ್ಯ ಹಕ್ಕುಗಳ ಕಾಯ್ದೆಯ ವ್ಯಾಜ್ಯಗಳನ್ನು 1 ವರ್ಷದಲ್ಲಿ ವಿಲೇವಾರಿ ಮಾಡಲಾಗುವುದು, ಎಸ್‌ಟಿ ಸಮುದಾಯದವರು ಜಾಸ್ತಿ ಇರುವ ಕಡೆ ಪಂಚಾಯತ್‌ ಎಕ್ಸ್‌ಟೆನ್ಶನ್‌ ಟು ಶೆಡ್ಯೂಲ್ಡ್‌ ಏರಿಯಾಸ್‌ ಆಕ್ಟ್‌ (PESA) ವಿಸ್ತರಣೆ, ಈ ಗ್ಯಾರಂಟಿಗಳನ್ನು ಕಾಂಗ್ರೆಸ್‌ ಘೋಷಣೆ ಮಾಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು