ನವದೆಹಲಿ: ಪಾಟ್ನಾದಲ್ಲಿ ನಡೆದ ವಿಪಕ್ಷಗಳ ಸಭೆ ಹಾಸ್ಯಾಸ್ಪದ ಎಂದು ಬಣ್ಣಿಸಿರುವ ಕೇಂದ್ರ ಸಚಿವೆ ಸ್ಮೃತಿ ಇರಾನಿ, ಪ್ರಧಾನಿ ನರೇಂದ್ರ ಮೋದಿಯನ್ನು ಕಾಂಗ್ರೆಸ್ ಪಕ್ಷ ಏಕಾಂಗಿಯಾಗಿ ಸೋಲಿಸಲು ಸಾಧ್ಯವಿಲ್ಲ ಮತ್ತು ಇತರರ ಬೆಂಬಲ ಬೇಕು ಎಂಬುದನ್ನು ಕಾಂಗ್ರೆಸ್ ಒಪ್ಪಿಕೊಂಡಿದೆ ಎಂದು ಹೇಳಿದ್ದಾರೆ.
ತುರ್ತುಪರಿಸ್ಥಿತಿಯ ಸಂದರ್ಭ ಪ್ರಜಾಪ್ರಭುತ್ವದ ಕಗ್ಗೊಲೆಯನ್ನು ಕಂಡಿದ್ದ ನಾಯಕರು ಇಂದು ಕಾಂಗ್ರೆಸ್ ನೇತೃತ್ವದಲ್ಲಿ ಒಂದಾಗುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಇರಾನಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.
‘ಅಧಿಕಾರ ರಾಜಭವನದಿಂದ ಜನರ ಬಳಿಗೆ ಬಂದಿದೆ. ಹಾಗಾಗಿಯೇ ತಮ್ಮ ರಾಜಕೀಯ ಪರಂಪರೆಯ ಬಗ್ಗೆ ಹೆಮ್ಮೆ ಪಡುತ್ತಿದ್ದ ಜನರು ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಯಾರನ್ನು ಜೈಲಿಗೆ ಹಾಕಿದ್ದರೋ ಅವರ ಬಳಿಗೆ ಹೋಗಬೇಕಾಗಿದೆ ಎಂದು ಇರಾನಿ ಹೇಳಿದರು. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಕುರಿತು ವ್ಯಂಗ್ಯವಾಡಿದ ಬಿಜೆಪಿ ಇರಾನಿ, ನೀವು ಸೇತುವೆ ನಿರ್ಮಿಸಲು ಸಾಧ್ಯವಾಗದ ಜನರ ಬಳಿಗೆ ಹೋಗುತ್ತೀದ್ದೀರಿ? ಅವರು ಯಾವ ಪ್ರಜಾಪ್ರಭುತ್ವ ಸೇತುವೆಯನ್ನು ನಿರ್ಮಿಸುತ್ತಾರೆ? ಎಂದು ಪ್ರಶ್ನಿಸಿದ್ದಾರೆ.