News Karnataka Kannada
Friday, May 17 2024
ದೆಹಲಿ

ಬಡಗಿಯಾದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ

Congress leader Rahul Gandhi becomes a carpenter
Photo Credit : News Kannada

ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಇತ್ತೀಚೆಗೆ ದೆಹಲಿ ಆನಂದ್ ವಿಹಾರ್ ರೈಲ್ವೆ ಟರ್ಮಿನಲ್ ನಿಲ್ದಾಣದಲ್ಲಿ ಹಮಾಲಿಗಳೊಂದಿಗೆ ಕೆಲಸ ಮಾಡಿ, ಅವರ ಸುಖ ಕಷ್ಟ ವಿಚಾರಿಸಿದ್ದರು. ಇದೀಗ ರಾಷ್ಟ್ರ ರಾಜಧಾನಿ ದೆಹಲಿಯ ಕೀರ್ತಿನಗರದಲ್ಲಿರುವ ಪೀಠೋಪಕರಣ ಮಾರುಕಟ್ಟೆಯಲ್ಲಿ ಬಡಗಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅವರು “ಇಂದು ನಾನು ದೆಹಲಿಯ ಕೀರ್ತಿನಗರದಲ್ಲಿರುವ ಏಷ್ಯಾದ ಅತಿದೊಡ್ಡ ಪೀಠೋಪಕರಣ ಮಾರುಕಟ್ಟೆಯ ಬಡಗಿ ಸಹೋದರರನ್ನು ಭೇಟಿ ಮಾಡಿದೆ.

ಅವರು ಶ್ರಮಜೀವಿಗಳಲ್ಲದೆ ಅದ್ಭುತ ಕಲಾವಿದರು ಎಂದು ಬರೆದು ಕೊಂಡಿದ್ದಾರೆ. ಕಾಂಗ್ರೆಸ್ ನಾಯಕ ಮಾರುಕಟ್ಟೆಗೆ ಭೇಟಿ ನೀಡಿದ ಫೋಟೋಗಳನ್ನು ಭಾರತೀಯ ಯುವ ಕಾಂಗ್ರೆಸ್ ಮುಖ್ಯಸ್ಥ ಶ್ರೀನಿವಾಸ್ ಬಿವಿ ಅವರು ತಮ್ಮ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದ್ದಾರೆ.

ಶ್ರೀನಿವಾಸ್ ಅವರು ತಮ್ಮ ಪೋಸ್ಟ್‌ನಲ್ಲಿ ಹೀಗೆ ಹೇಳಿದ್ದಾರೆ “ನಮ್ಮ ಮಾಸ್ ಲೀಡರ್ ರಾಹುಲ್ ಗಾಂಧಿ ದೆಹಲಿಯ ಕೀರ್ತಿನಗರದಲ್ಲಿರುವ ಏಷ್ಯಾದ ಅತಿದೊಡ್ಡ ಪೀಠೋಪಕರಣ ಮಾರುಕಟ್ಟೆಗೆ ಭೇಟಿ ನೀಡಿ ಶ್ರಮಿಕ ಸಹೋದರರನ್ನು ಭೇಟಿಯಾಗಿ ಮಾತನಾಡಿಸಿದ್ದಾರೆ. ಇದೇ ರೀತಿ ಭಾರತ ಜೋಡೋ ಪ್ರಯಾಣ ಮುಂದುವರಿಯಲಿದೆ ಎಂದು ಹೇಳಿದ್ದಾರೆ.

ಸೆಪ್ಟೆಂಬರ್ 21 ರಂದು ರಾಹುಲ್ ಗಾಂಧಿ ಅವರು ಆನಂದ್ ವಿಹಾರ್ ರೈಲ್ವೆ ನಿಲ್ದಾಣದಲ್ಲಿ ಹಮಾಲರನ್ನು ಭೇಟಿ ಮಾಡಿ ಹಮಾಲಿಗಳೊಂದಿಗೆ ಸಂವಾದ ನಡೆಸಿದ್ದರು. ಅಲ್ಲದೆ ತಲೆ ಮೇಲೆ ವಸ್ತುಗಳನ್ನು ಹೊತ್ತು ನಡೆದು ಸುತ್ತ ನೆರೆದಿದ್ದ ಜನರನ್ನು ಅಚ್ಚರಿಗೊಳಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು