News Karnataka Kannada
Wednesday, May 01 2024
ದೆಹಲಿ

ಸಂಘಟನೆಯಲ್ಲಿ ಬದಲಾವಣೆ ಮಾಡಿಕೊಂಡ ಕಾಂಗ್ರೆಸ್ ಪಕ್ಷ

Congress party changes organisation
Photo Credit : News Kannada

ನವದೆಹಲಿ: 2024ರ ನಿರ್ಣಾಯಕ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಕಾಂಗ್ರೆಸ್ ಪಕ್ಷ ತನ್ನ ಸಂಘಟನೆಯಲ್ಲಿ ಬದಲಾವಣೆ ಮಾಡಿದೆ.

ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯ ಪ್ರಕಾರ, ಹೊಸ ರಚನೆಯಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಯುಪಿ ಕಾಂಗ್ರೆಸ್ ಉಸ್ತುವಾರಿ ಹುದ್ದೆಯಿಂದ ಮುಕ್ತಗೊಳಿಸಲಾಗಿದೆ. ಇದಲ್ಲದೆ, ಸಚಿನ್ ಪೈಲಟ್ ಅವರನ್ನು ಛತ್ತೀಸ್​ಗಢದ ಕಾಂಗ್ರೆಸ್ ಉಸ್ತುವಾರಿಯಾಗಿ ಮತ್ತು ರಮೇಶ್ ಚೆನ್ನಿಥಾಲಾ ಅವರನ್ನು ಮಹಾರಾಷ್ಟ್ರದ ಎಐಸಿಸಿ ಉಸ್ತುವಾರಿಯಾಗಿ, ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಕರ್ನಾಟಕದಲ್ಲಿ ಕಾಂಗ್ರೆಸ್​ ಪಕ್ಷದ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ.

ದೀಪಕ್ ಬಾಬರಿಯಾ ದೆಹಲಿ ಮತ್ತು ಹರಿಯಾಣವನ್ನು ನೋಡಿಕೊಳ್ಳಲಿದ್ದಾರೆ. ಉತ್ತರ ಪ್ರದೇಶಕ್ಕೆ ಅವಿನಾಶ್ ಪಾಂಡೆ ಅವರನ್ನು ಉಸ್ತುವಾರಿಯಾಗಿ ನೇಮಿಸಿದೆ.

ಮುಕುಲ್ ವಾಸ್ನಿಕ್ ಅವರನ್ನು ಗುಜರಾತ್​ನ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ. ಜಿತೇಂದ್ರ ಸಿಂಗ್ ಅವರನ್ನು ಅಸ್ಸಾಂ ಮತ್ತು ಮಧ್ಯಪ್ರದೇಶಕ್ಕೆ ನಿಯೋಜಿಸಲಾಗಿದೆ. ಉತ್ತರಾಖಂಡದ ಉಸ್ತುವಾರಿಯಾಗಿ ಕುಮಾರಿ ಸೆಲ್ಜಾ, ಅವರನ್ನು ನೇಮಿಸಲಾಗಿದೆ ಎಂದು ವರದಿಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು