News Karnataka Kannada
Friday, May 17 2024
ದೆಹಲಿ

‘ಪ್ಯಾಲೇಸ್ತೀಯನ್ ಹಕ್ಕುಗಳಿಗೆ’ ಕಾಂಗ್ರೆಸ್ ಬೆಂಬಲ: ಸಿಡಬ್ಯೂಸಿ ಸಭೆ ಬಳಿಕ ಘೋಷಣೆ

Congress supports 'Palestinian rights': CWC meeting
Photo Credit : News Kannada

ನವದೆಹಲಿ: ಇಸ್ರೇಲ್‌ನಲ್ಲಿ ನೆಲದಲ್ಲಿ ಯುದ್ಧ ಘೋಷಣೆಯಾದ ಬಳಿಕ ಸಾವು-ನೋವು ವರದಿಯಾಗುತ್ತಿದೆ. ಇತ್ತ ಇಸ್ರೇಲ್‌ ಜೊತೆ ವಿಶ್ವದ ಹಲವು ರಾಷ್ಟ್ರಗಳು ಬೆಂಬಲವಾಗಿ ನಿಂತಿವೆ. ಭಾರತ ಸಹ ಇಸ್ರೇಲ್ ಪರವಾಗಿ ಬೆಂಬಲ ಸೂಚಿಸಿದೆ. ಆದರೆ “ಕಾಂಗ್ರೆಸ್ ಪ್ಯಾಲೆಸ್ತೀನ್ ಹಕ್ಕುಗಳ ಪರವಾಗಿ ನಿಲ್ಲುವುದಾಗಿ” ತಿಳಿಸಿದೆ.

ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಿತಿಯು ಪ್ರಕಟಣೆ ಹೊರಡಿಸಿ ಈ ನಿರ್ಧಾರ ಪ್ರಕಟಿಸಿದೆ. ಇಸ್ರೇಲ್ ಹಾಗೂ ಹಮಾಸ್ ಬಂಡುಕೋರರ ನಡುವಿನ ಯುದ್ಧದಲ್ಲಿ ತಕ್ಷಣವೇ ಕದನ ವಿರಾಮ ಘೋಷಿಸಬೇಕು. ಪ್ಯಾಲೆಸ್ತೀನ್ ಜನರ ಭೂಮಿ, ಸ್ವ-ಸರ್ಕಾರ ಮತ್ತು ಬದುಕುವ ಹಕ್ಕುಗಳಿಗಾಗಿ ಅವರಿಗೆ ಬೆಂಬಲ ಸೂಚಿಸುತ್ತೇವೆ ಎಂದಿದೆ.

ʼಇಸ್ರೇಲ್ ಜನರ ಮೇಲಿನ ಕ್ರೂರ ದಾಳಿಯನ್ನು ನಾವು ಖಂಡಿಸುತ್ತೇವೆʼ ಎಂದು ಕಾಂಗ್ರೆಸ್ ಪಕ್ಷವು ಈ ಮೊದಲು ಹೇಳಿತ್ತು. ಇದಾಗಿ ಸಿಡಬ್ಯೂಸಿ ಸಭೆಯ ಬಳಿಕ ಪ್ಯಾಲೆಸ್ತೀನ್ ಜನರ ಕಾನೂನುಬದ್ಧ ಬೇಡಿಕೆಗಳನ್ನು ಮಾತುಕತೆಯ ಮೂಲಕ ಇತ್ಯರ್ಥಗೊಳಿಸಬೇಕು ಎಂದು ತಮ್ಮ ಪಕ್ಷವು ಯಾವಾಗಲೂ ನಂಬುತ್ತದೆ” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು