ನವದೆಹಲಿ: ಸಿದ್ದರಾಮಯ್ಯ ಸರ್ಕಾರದ ಉದ್ದೇಶ ಕೇವಲ ಶಿಕ್ಷಣ ಸಂಸ್ಥೆಗಳಲ್ಲಿನ ಹಿಜಾಬ್ ನಿಷೇಧ ವಾಪಸ್ ಪಡೆಯುವುದಲ್ಲ. ಬದಲಿಗೆ ಷರಿಯಾ ಕಾನೂನನ್ನು ಜಾರಿಗೆ ತರುವುದಾಗಿದೆ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಟೀಕಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ಆದೇಶವನ್ನು ಹಿಂಪಡೆಯವುದಾಗಿ ಘೋಷಣೆ ಮಾಡಿರುವ ಬಗ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಷರಿಯಾ ಕಾನೂನು ಜಾರಿಯಾಗಲಿದೆ. ‘ಇದು ಕೇವಲ ಹಿಜಾಬ್ ಮೇಲಿನ ನಿಷೇಧವನ್ನು ತೆಗೆದುಹಾಕುವುದಲ್ಲ. ರಾಜ್ಯದಲ್ಲಿ ಷರಿಯಾ ಕಾನೂನನ್ನು ಸ್ಥಾಪಿಸುವ ಸಂಚು ಈ ನಿರ್ಧಾರದ ಹಿಂದಿದೆ. ರಾಹುಲ್ ಗಾಂಧಿ, ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟ ದೇಶದಲ್ಲಿ ಸರ್ಕಾರ ರಚಿಸಿದರೆ, ನಂತರ ಇಸ್ಲಾಮಿಕ್ ಷರಿಯಾ ಕಾನೂನು ಜಾರಿಗೆ ಬರಲಿದೆ’ ಎಂದು ಗಿರಿರಾಜ್ ಸಿಂಗ್ ಹೇಳಿಕೆ ನೀಡಿದ್ದಾರೆ.
#WATCH | On no hijab ban in Karnataka announced by CM Siddaramaiah, Union minister Giriraj Singh says,”…This is not merely lifting of the ban on hijab but the establishment of Sharia law in the state. If Rahul Gandhi, Congress and INDI alliance form govt in the country, then… pic.twitter.com/jdCyI0WB5Y
— ANI (@ANI) December 23, 2023