ನವದೆಹಲಿ: ಭಾರತೀಯ ಗುಪ್ತಚರ ಅಧಿಕಾರಿಯೊಬ್ಬರು ಖಲಿಸ್ತಾನ್ ನಾಯಕ ಮತ್ತು ನಿಷೇಧಿತ ಸಂಘಟನೆಯ ಸಿಖ್ ಫಾರ್ ಜಸ್ಟಿಸ್ (ಎಸ್ಎಫ್ಜೆ) ಸ್ಥಾಪಕ ಗುರ್ಪತ್ವಂತ್ ಸಿಂಗ್ ಪನ್ನುನ್ ಅವರನ್ನು ಕೊಲ್ಲಲು ಸಂಚು ರೂಪಿಸಿದ್ದಾರೆ ಎಂದು ಯುಎಸ್ ಫೆಡರಲ್ ಪ್ರಾಸಿಕ್ಯೂಟರ್ಗಳು ಆರೋಪಿಸಿದ್ದರು. ಇದೀಗ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಈ ಬಗ್ಗೆ ಹೇಳಿಕೆ ನೀಡಿದ್ದು, ಇಂತಹ ಹೇಳಿಕೆ ಗಂಭೀರವಾಗಿದ್ದು , ಭಾರತ ಸರ್ಕಾರದ ನೀತಿಗೆ ವಿರುದ್ಧವಾಗಿದೆ” ಎಂದು ಹೇಳಿದೆ.
52 ವರ್ಷ ವಯಸ್ಸಿನ ಭಾರತೀಯ ವ್ಯಕ್ತಿಯನ್ನು ಯುಎಸ್ ನೆಲದಲ್ಲಿ ಸಿಖ್ ನಾಯಕನನ್ನು ಹತ್ಯೆ ಮಾಡುವ ಸಂಚಿನ ಪ್ರಮುಖ ವ್ಯಕ್ತಿ ಎಂದು ಯುನೈಟೆಡ್ ಸ್ಟೇಟ್ಸ್ ಪರಿಗಣಿಸುತ್ತದೆ ಎಂದು ಅಮೆರಿಕ ಹೇಳಿತ್ತು. 52 ವರ್ಷದ ನಿಖಿಲ್ ಗುಪ್ತಾ ಭಾರತೀಯ ಪ್ರಜೆ ಎಂದು ಅಮೆರಿಕ ನ್ಯಾಯಾಂಗ ಇಲಾಖೆ ಪತ್ರಿಕಾ ಪ್ರಕಟಣೆ ತಿಳಿಸಿದೆ.
ಯುನೈಟೆಡ್ ಸ್ಟೇಟ್ಸ್ ಮತ್ತು ಜೆಕ್ ರಿಪಬ್ಲಿಕ್ ನಡುವಿನ ದ್ವಿಪಕ್ಷೀಯ ಹಸ್ತಾಂತರ ಒಪ್ಪಂದದ ಪ್ರಕಾರ ಜೂನ್ 30 ರಂದು ಜೆಕ್ ಅಧಿಕಾರಿಗಳು ಅವರನ್ನು ಬಂಧಿಸಿದರು. ಒಬ್ಬ ಭಾರತೀಯ ಸರ್ಕಾರಿ ನೌಕರನು ನಿಖಿಲ್ ಗುಪ್ತಾ ಸೇರಿ ಭಾರತ, ಅಮೆರಿಕ ನೆಲದಲ್ಲಿ ವಕೀಲ, ರಾಜಕೀಯ ಕಾರ್ಯಕರ್ತನನ್ನು ಹತ್ಯೆ ಮಾಡುವ ಸಂಚಿನಲ್ಲಿ ಭಾಗಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.
ಈತನ ಮೇಲೆ ಅಂತರರಾಷ್ಟ್ರೀಯ ಮಾದಕವಸ್ತು ಮತ್ತು ಶಸ್ತ್ರಾಸ್ತ್ರಗಳ ಕಳ್ಳಸಾಗಣೆಯಲ್ಲಿ ತೊಡಗಿಸಿಕೊಂಡಿರುವ ಆರೋಪವನ್ನು ಅಮೆರಿಕ ಹೊರಿಸಿದೆ.