News Karnataka Kannada
Saturday, May 11 2024
ದೆಹಲಿ

ಪನ್ನುನ್‌ ಹತ್ಯೆ ಸಂಚಿನಲ್ಲಿ ಆರೋಪ ಕೇಳಿ ಬಂದಿರುವ ನಿಖಿಲ್‌ ಯಾರು

ಭಾರತೀಯ ಗುಪ್ತಚರ ಅಧಿಕಾರಿಯೊಬ್ಬರು ಖಲಿಸ್ತಾನ್ ನಾಯಕ ಮತ್ತು ನಿಷೇಧಿತ ಸಂಘಟನೆಯ ಸಿಖ್ ಫಾರ್ ಜಸ್ಟಿಸ್ (ಎಸ್‌ಎಫ್‌ಜೆ) ಸ್ಥಾಪಕ ಗುರ್ಪತ್‌ವಂತ್ ಸಿಂಗ್ ಪನ್ನುನ್ ಅವರನ್ನು ಕೊಲ್ಲಲುಸಂಚು ರೂಪಿಸಿದ್ದಾರೆ ಎಂದು ಯುಎಸ್ ಫೆಡರಲ್ ಪ್ರಾಸಿಕ್ಯೂಟರ್‌ಗಳು ಆರೋಪಿಸಿದ್ದರು.
Photo Credit : News Kannada

ನವದೆಹಲಿ: ಭಾರತೀಯ ಗುಪ್ತಚರ ಅಧಿಕಾರಿಯೊಬ್ಬರು ಖಲಿಸ್ತಾನ್ ನಾಯಕ ಮತ್ತು ನಿಷೇಧಿತ ಸಂಘಟನೆಯ ಸಿಖ್ ಫಾರ್ ಜಸ್ಟಿಸ್ (ಎಸ್‌ಎಫ್‌ಜೆ) ಸ್ಥಾಪಕ ಗುರ್ಪತ್‌ವಂತ್ ಸಿಂಗ್ ಪನ್ನುನ್ ಅವರನ್ನು ಕೊಲ್ಲಲು ಸಂಚು ರೂಪಿಸಿದ್ದಾರೆ ಎಂದು ಯುಎಸ್ ಫೆಡರಲ್ ಪ್ರಾಸಿಕ್ಯೂಟರ್‌ಗಳು ಆರೋಪಿಸಿದ್ದರು. ಇದೀಗ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಈ ಬಗ್ಗೆ ಹೇಳಿಕೆ ನೀಡಿದ್ದು, ಇಂತಹ ಹೇಳಿಕೆ ಗಂಭೀರವಾಗಿದ್ದು , ಭಾರತ ಸರ್ಕಾರದ ನೀತಿಗೆ ವಿರುದ್ಧವಾಗಿದೆ” ಎಂದು ಹೇಳಿದೆ.

52 ವರ್ಷ ವಯಸ್ಸಿನ ಭಾರತೀಯ ವ್ಯಕ್ತಿಯನ್ನು ಯುಎಸ್ ನೆಲದಲ್ಲಿ ಸಿಖ್ ನಾಯಕನನ್ನು ಹತ್ಯೆ ಮಾಡುವ ಸಂಚಿನ ಪ್ರಮುಖ ವ್ಯಕ್ತಿ ಎಂದು ಯುನೈಟೆಡ್ ಸ್ಟೇಟ್ಸ್ ಪರಿಗಣಿಸುತ್ತದೆ ಎಂದು ಅಮೆರಿಕ ಹೇಳಿತ್ತು. 52 ವರ್ಷದ ನಿಖಿಲ್ ಗುಪ್ತಾ ಭಾರತೀಯ ಪ್ರಜೆ ಎಂದು ಅಮೆರಿಕ ನ್ಯಾಯಾಂಗ ಇಲಾಖೆ ಪತ್ರಿಕಾ ಪ್ರಕಟಣೆ ತಿಳಿಸಿದೆ.

ಯುನೈಟೆಡ್ ಸ್ಟೇಟ್ಸ್ ಮತ್ತು ಜೆಕ್ ರಿಪಬ್ಲಿಕ್ ನಡುವಿನ ದ್ವಿಪಕ್ಷೀಯ ಹಸ್ತಾಂತರ ಒಪ್ಪಂದದ ಪ್ರಕಾರ ಜೂನ್ 30 ರಂದು ಜೆಕ್ ಅಧಿಕಾರಿಗಳು ಅವರನ್ನು ಬಂಧಿಸಿದರು. ಒಬ್ಬ ಭಾರತೀಯ ಸರ್ಕಾರಿ ನೌಕರನು ನಿಖಿಲ್ ಗುಪ್ತಾ ಸೇರಿ ಭಾರತ, ಅಮೆರಿಕ ನೆಲದಲ್ಲಿ ವಕೀಲ, ರಾಜಕೀಯ ಕಾರ್ಯಕರ್ತನನ್ನು ಹತ್ಯೆ ಮಾಡುವ ಸಂಚಿನಲ್ಲಿ ಭಾಗಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.

ಈತನ ಮೇಲೆ ಅಂತರರಾಷ್ಟ್ರೀಯ ಮಾದಕವಸ್ತು ಮತ್ತು ಶಸ್ತ್ರಾಸ್ತ್ರಗಳ ಕಳ್ಳಸಾಗಣೆಯಲ್ಲಿ ತೊಡಗಿಸಿಕೊಂಡಿರುವ ಆರೋಪವನ್ನು ಅಮೆರಿಕ ಹೊರಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು