ನವದೆಹಲಿ: ರಾಮ ಮಂದಿರ ನಿರ್ಮಾಣವೇ ಒಂದು ಶೋ ಆಫ್ ಎಂದು ಕಾಂಗ್ರೆಸ್ ನಾಯಕ, ಹಿರಿಯ ವಕೀಲ ಕಪಿಲ್ ಸಿಬಲ್ ಹೇಳಿದ್ದಾರೆ. ರಾಮನ ಆದರ್ಶಕ್ಕೂ ಬಿಜೆಪಿ ನಡೆಗೂ ಯಾವುದೇ ಸಂಬಂಧವಿಲ್ಲ. ಬಿಜೆಪಿ ಯಾವ ಆದರ್ಶವಿಲ್ಲದ ಪಕ್ಷ ಎಂದು ಕಪಿಲ್ ಸಿಬಲ್ ಹೇಳಿದ್ದಾರೆ.
ರಾಮ ಮಂದಿರ ಪ್ರಾಣಪ್ರತಿಷ್ಠೆಯಲ್ಲಿ ನೀವು ಪಾಲ್ಗೊಳ್ಳುತ್ತೀರಾ ಎಂದು ಕಪಿಲ್ ಸಿಬಲ್ರನ್ನು ಪ್ರಶ್ನೆ ಮಾಡಿದಾಗ ಈ ಮೇಲಿನಂತೆ ಉತ್ತರಿಸಿದ್ದಾರೆ. ರಾಮ ಮಂದಿರ ನಿರ್ಮಾಣ ಬಿಜೆಪಿ ಮಾಡುತ್ತಿರುವ ಒಂದು ಶೋ ಆಫ್. ರಾಮನ ಯಾವುದೇ ಆದರ್ಶಗಳನ್ನು ಬಿಜೆಪಿ ಪಾಲಿಸುತ್ತಿಲ್ಲ. ಬಿಜೆಪಿ ವಿರುದ್ಧ ದಿಕ್ಕಿನಲ್ಲಿ ಸಾಗುತ್ತಿರುವ ಪಕ್ಷವಾಗಿದೆ ಎಂದು ಸಿಬಲ್ ಹೇಳಿದ್ದಾರೆ.
ನನ್ನ ಹೃದಯದಲ್ಲಿ ರಾಮನಿದ್ದಾನೆ. ನನ್ನ ಕೆಲಕ್ಕೆ ರಾಮ ಪ್ರೇರಣೆ ನೀಡಿದ್ದಾನೆ. ಇದನ್ನು ಶೋ ಆಫ್ ಮಾಡಬೇಕಾದ ಅವಶ್ಯಕತೆ ನನಗಿಲ್ಲ. ರಾಮ ಮಂದಿರ ನಿರ್ಮಾಣದ ಶೋ ಆಫ್ ಮಾಡುತ್ತಿರುವುದು ಬಿಜೆಪಿ. ರಾಮ ನಮ್ಮ ಹೃದಯಲ್ಲಿರಬೇಕು. ಬಿಜೆಪಿಯಲ್ಲಿ ಇಲ್ಲ ಎಂದು ಕಪಿಲ್ ಸಿಬಲ್ ಹೇಳಿದ್ದಾರೆ. ಈ ಮೂಲಕ ರಾಮ ಮಂದಿರ ಉದ್ಘಾಟನೆಗೆ ತಾವು ತೆರಳುತ್ತಿಲ್ಲ ಅನ್ನೋದನ್ನು ಪರೋಕ್ಷವಾಗಿ ಹೇಳಿದ್ದಾರೆ.