ನವದೆಹಲಿ: ‘ನಾವು ತೆಗೆದುಕೊಳ್ಳುವ ನಿರ್ಧಾರ ಮುಂದಿನ ಒಂದು ಸಾವಿರ ವರ್ಷ ಭಾರತ ದಿಕ್ಕನ್ನು ತೋರಿಸಲಿದೆ. ಈ ಅವಧಿಯಲ್ಲಿ ತೆಗೆದುಕೊಳ್ಳುವ ನಿರ್ಧಾರ ಮುಂದಿನ ಒಂದು ಸಾವಿರ ವರ್ಷದಲ್ಲಿ ಸುವರ್ಣ ಅಕ್ಷರಗಳಲ್ಲಿ ಬರೆದಿಡುವ ಸಮಯವಾಗಿದೆ’ ಎಂದು ಪ್ರಧಾನಿ ಮೋದಿ ಹೇಳಿದರು.
77ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೆಂಪು ಕೋಟೆಯಲ್ಲಿ ಇಂದು ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಗುಲಾಮಿ ಮನಸ್ಥಿತಿಯಿಂದ ಹೊರ ಬರುವ ನಿರ್ಧಾರ ತೆಗೆದುಕೊಳ್ಳುವ ಸಮಯವಾಗಿದೆ. ಭಾರತ ಹೊಸ ಸಾಮರ್ಥ್ಯದೊಂದಿಗೆ ಎಲ್ಲರನ್ನು ಸೆಳೆಯಲಿದೆ. ಈ ಹಿಂದಿನ ಗುಲಾಮಿ ವ್ಯವಸ್ಥೆ ಮತ್ತು ಮುಂದಿನ ಒಂದು ಸಾವಿರ ವರ್ಷದ ಭವ್ಯ ಭಾರತದ ನಡುವೆ ನಾವಿದ್ದೇವೆ.
ಸ್ವಾತಂತ್ರ್ಯದ ‘ಅಮೃತ ಕಾಲ’ದಲ್ಲಿ ಬದುಕಲು ನಾವು ಅದೃಷ್ಟವಂತರು.
ಇತರ ದೇಶಗಳಿಗೆ ವಯಸ್ಸಾಗುತ್ತಿರುವಾಗ, ಭಾರತ ಯುವವಾಗಿದೆ. ನಾವು ವಿಶ್ವದಲ್ಲೇ ಅತಿ ಹೆಚ್ಚು ಯುವಕರನ್ನು ಹೊಂದಿದ್ದೇವೆ’ ಎಂದು ಮೋದಿ ಹೇಳಿದರು.