ದೆಹಲಿ: ಸಿಎಂ ಅರವಿಂದ ಕೇಜ್ರಿವಾಲ್ ಮಿಲ್ಡ್ ಕಾಲ್ ಅಭಿಯಾನ ಆರಂಭಿಸಿದ್ದಾರೆ. ಭಾರತವನ್ನು ನಂಬರ್ 1 ಮಾಡಲು ರಾಷ್ಟ್ರೀಯ ಮಿಷನ್ ಗೆ ಕೈ ಜೋಡಿಸಿ, 9510001000 ಎಂಬ ಸಂಖ್ಯೆಗೆ ಮಿಸ್ಡ್ ಕಾಲ್ ನೀಡಿ.
ಭಾರತವನ್ನು ಅಗ್ರ ಸ್ಥಾನಕ್ಕೇರಿಸೋಣ ಎಂದು ವಿಡಿಯೊ ಸಂದೇಶ ನೀಡಿದ ಕೇಜ್ರಿವಾಲ್ ಹೇಳಿದ್ದಾರೆ. ಸಿಸೋಡಿಯಾ ಮನೆ ಮೇಲೆ ಸಿಬಿಐ ದಾಳಿ ನಡೆದ ಕೆಲವು ಗಂಟೆಗಳ ನಂತರ ವಿಡಿಯೊ ಸಂವಾದದಲ್ಲಿ ಕೇಜ್ರಿವಾಲ್ ಮಾತನಾಡಿದ್ದಾರೆ.
ಸಿಬಿಐ ದಾಳಿ ಬಗ್ಗೆ ಭಯ ಪಡುವ ಅಗತ್ಯವಿಲ್ಲ. ಅವರು ಅವರ ಕೆಲಸ ಮಾಡಲಿ. ನಮಗೆ ಕಿರುಕುಳ ನೀಡಲು ಅವರಿಗೆ ಮೇಲಿನಿಂದ ಆದೇಶ ಬಂದಿರುತ್ತದೆ. ನಮ್ಮ ಒಳ್ಳೆಯ ಕೆಲಸವನ್ನು ಜಗತ್ತೇ ಹೊಗಳುತ್ತಿರುವಾಗ ಕೇಂದ್ರ ಸರ್ಕಾರ ನಮ್ಮನ್ನು ಟಾರ್ಗೆಟ್ ಮಾಡುತ್ತಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.
ದೆಹಲಿಯಲ್ಲಿ ಸಿಸೋಡಿಯಾ ಅವರು ಮಾಡಿದ ಶಿಕ್ಷಣದ ಮಾದರಿಯನ್ನು ಹೊಗಳಿ ನ್ಯೂಯಾರ್ಕ್ ಟೈಮ್ಸ್ ಮುಖಪುಟದಲ್ಲಿ ವರದಿ ಪ್ರಕಟಿದೆ. ಇದನ್ನು ತೋರಿಸಿ ಮಾತನಾಡಿದ ಕೇಜ್ರಿವಾಲ್, ಅಡೆತಡೆಗಳಿವೆ, ಆದರೆ ನಮ್ಮ ಕೆಲಸ ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ .
भारत को दुनिया का नम्बर वन देश बनाने के लिए साथ आयें। इस मिशन से जुड़ने के लिए 9510001000 पर मिस कॉल करें। हमें देश के 130 करोड़ लोगों को जोड़ना है।
— Arvind Kejriwal (@ArvindKejriwal) August 19, 2022