ಹೊಸದಿಲ್ಲಿ, ಎ.15: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮುಂದೆ ಹಾಜರಾಗುವಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸಮನ್ಸ್ ಜಾರಿಗೊಳಿಸಿದ ಒಂದು ದಿನದ ಬಳಿಕ ದಿಲ್ಲಿ ಸರಕಾರವು ಏಪ್ರಿಲ್ 17ರಂದು ವಿಧಾನಸಭೆಯ ವಿಶೇಷ ಅಧಿವೇಶನವನ್ನು ಕರೆದಿದೆ.
ಸಿಬಿಐ ಸಮನ್ಸ್ಗೆ ಪ್ರತಿಕ್ರಿಯಿಸಿದ ಕೇಜ್ರಿವಾಲ್, ಕೇಂದ್ರ ತನಿಖಾ ಸಂಸ್ಥೆಗಳು ಕೇವಲ ಪ್ರಬಲ ರಾಜಕೀಯ ಪ್ರತಿಸ್ಪರ್ಧಿಗಳನ್ನು ಗುರಿಯಾಗಿಸಿವೆ ಎಂದರು.
ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಬಂಧನವನ್ನು ಉಲ್ಲೇಖಿಸಿದ ಕೇಜ್ರಿವಾಲ್, ಈ ತನಿಖಾ ಏಜೆನ್ಸಿಗಳು 14 ಫೋನ್ಗಳನ್ನು ನಾಶಪಡಿಸಲಾಗಿದೆ ಎಂದು ಸುಳ್ಳು ಹೇಳುತ್ತಿವೆ. ಅಫಿಡವಿಟ್ಗಳಲ್ಲಿ ನ್ಯಾಯಾಲಯಗಳಿಗೆ ಸುಳ್ಳು ಹೇಳುತ್ತಿವೆ, ಸುಳ್ಳು ತಪ್ಪೊಪ್ಪಿಗೆಗಳನ್ನು ಪಡೆಯಲು ಶಂಕಿತರಿಗೆ ಚಿತ್ರಹಿಂಸೆ ನೀಡುತ್ತಿವೆ ಎಂದು ಹೇಳಿದರು.