ದೆಹಲಿ: ಭಾರತದ ಪ್ರಥಮ ಪ್ರಜೆಯಾಗಿ ಆಯ್ಕೆಯಾಗಿರುವ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಸಂಸದರೂ, ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ದೆಹಲಿಯಲ್ಲಿ ಶುಕ್ರವಾರ ಭೇಟಿಯಾಗಿ ಅಭಿನಂದಿಸಿದರು.
ಕಟೀಲು ದೇವಿ ಶ್ರೀ ದುರ್ಗಾಪರಮೇಶ್ವರಿ ಕೃಪೆಯಿಂದ ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದ ರಾಷ್ಟ್ರಪತಿಯಾಗಿ ಜವಾಬ್ದಾರಿ ಸ್ವೀಕರಿಸಲಿರುವ ಅವರ ಮುಂದಿನ ಹಾದಿ ಸುಗಮವಾಗಲಿ ಎಂದು ಹಾರೈಸಿದರು.