News Karnataka Kannada
Tuesday, May 07 2024
ದೆಹಲಿ

ದೆಹಲಿ: ನೂಪುರ್‌ ಶರ್ಮಾ ಅವರ ಬಂಧನ ಮಾಡುವಂತಿಲ್ಲ ಎಂದ ಸುಪ್ರೀಂ ಕೋರ್ಟ್‌

ಸುಪ್ರೀಂ ಕೋರ್ಟ್‌
Photo Credit : Twitter

ದೆಹಲಿ: ನೂಪುರ್‌ ಶರ್ಮಾ ಅವರ ಬಂಧನ ಮಾಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ಸೂಚಿಸಿದೆ. ನೂಪುರ್‌ ಶರ್ಮಾ ವಿರುದ್ಧ ದೇಶದ ವಿವಿಧ ಪ್ರದೇಶಗಳಲ್ಲಿ ಎಫ್‌ಐಆರ್‌ ದಾಖಲು ಮಾಡಲಾಗಿತ್ತು. ಬಂಧನಕ್ಕೆ ತಡೆ ಕೋರಿ ಇತ್ತೀಚೆಗೆ ನೂಪುರ್‌ ಶರ್ಮಾ, ಸುಪ್ರೀಂ ಕೋರ್ಟ್‌ ಕದ ತಟ್ಟಿದ್ದರು. ಇದರ ವಿಚಾರಣೆಯನ್ನು ಮಂಗಳವಾರ ನಡೆಸಿದ ಸುಪ್ರೀಂ ಕೋರ್ಟ್‌ ಈ ತೀರ್ಪು ನೀಡಿದೆ.

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜೆಬಿ ಪರ್ದಿವಾಲಾ ಅವರ ಪೀಠವು ಎಫ್‌ಐಆರ್‌ಗಳನ್ನು ರದ್ದು ಮಾಡುವ ಅಥವಾ ಪರ್ಯಾಯವಾಗಿ ಎಲ್ಲಾ ಎಫ್‌ಐಆರ್‌ಗಳನ್ನು ದೆಹಲಿಗೆ ವರ್ಗಾಯಿಸುವಂತೆ ಶರ್ಮಾ ಅವರ ಮನವಿಯ ಮೇಲೆ ನೋಟಿಸ್ ಜಾರಿ ಮಾಡಿದೆ.

ಮುಂದಿನ ವಿಚಾರಣೆ ದಿನಾಂಕದವರೆಗೂ ಬಂಧನದಿಂದ ರಕ್ಷಣೆ ನೀಡಿರುವ ಸುಪ್ರೀಂಕೋರ್ಟ್​, ಅವರ ವಿರುದ್ಧ ದಾಖಲಾಗಿರುವ ಎಲ್ಲ ಎಫ್​ಐಆರ್​ ಒಟ್ಟಿಗೆ ಸೇರಿಸಲು ಸೂಚಿಸಿದೆ. ಇದರ ಜೊತೆಗೆ ಮುಂದಿನ ವಿಚಾರಣೆ ಆಗಸ್ಟ್​​ 10ರಂದು ಮುಂದೂಡಿಕೆ ಮಾಡಿ, ಆದೇಶ ಹೊರಡಿಸಿದೆ.

ಇನ್ನು ಎಲ್ಲಾ ಎಫ್‌ಐಆರ್‌ಗಳನ್ನು ರದ್ದುಗೊಳಿಸಲು ನೂಪುರ್‌ ಶರ್ಮಾ ಅವರು ಹೈಕೋರ್ಟ್‌ಗೆ ತೆರಳಲು ಅವಕಾಶ ನೀಡುವ ಆಯ್ಕೆಯನ್ನು ಅನ್ವೇಷಿಸುವುದಾಗಿ ನ್ಯಾಯಾಲಯ ಹೇಳಿದೆ.

ಅರ್ಜಿದಾರರು ತಮ್ಮ ವಿರುದ್ಧ ದಾಖಲಾದ ಎಲ್ಲಾ ಎಫ್‌ಐಆರ್‌ಗಳನ್ನು ರದ್ದುಗೊಳಿಸಲು ನ್ಯಾಯಾಲಯವನ್ನು ಸಂಪರ್ಕಿಸಿದ್ದರು. ಅವರ ರದ್ದುಗೊಳಿಸುವ ಮನವಿಯನ್ನು 226 ನೇ ವಿಧಿಯ ಅಡಿಯಲ್ಲಿ ಅಧಿಕಾರವನ್ನು ಚಲಾಯಿಸುವ ಮೂಲಕ ಹೈಕೋರ್ಟಿನಿಂದ ನೀಡಬಹುದಾದ್ದರಿಂದ, ಈ ನ್ಯಾಯಾಲಯವು 2022ರ ಜುಲೈ 1 ರಂದು ಪರ್ಯಾಯ ಪರಿಹಾರವನ್ನು ಪಡೆಯಲು ಅರ್ಜಿದಾರರನ್ನು ಕೆಳ ನ್ಯಾಯಾಲಯಕ್ಕೆ ಹೋಗುವಂತೆ ಸೂಚಿಸಿತ್ತು ಎಂದು ವಿಚಾರಣೆಯ ವೇಳೆ ಹೇಳಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು