News Karnataka Kannada
Monday, April 29 2024
ದೆಹಲಿ

ಸುರ್ಜೇವಾಲಾ ಬಿಜೆಪಿ ಸಂಸದೆ ವಿರುದ್ಧ ಅವಹೇಳನಕಾರಿ ಹೇಳಿಕೆ: 2 ದಿನ ಚುನಾವಣಾ ಪ್ರಚಾರಕ್ಕೆ ನಿಷೇಧ

ಹಿರಿಯ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಅವರನ್ನು 2 ದಿನಗಳ ಕಾಲ ಚುನಾವಣಾ ಪ್ರಚಾರಕ್ಕೆ ನಿರ್ಬಂಧಿಸಲಾಗಿದೆ.
Photo Credit : NewsKarnataka

ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಅವರನ್ನು 2 ದಿನಗಳ ಕಾಲ ಚುನಾವಣಾ ಪ್ರಚಾರಕ್ಕೆ ನಿರ್ಬಂಧಿಸಲಾಗಿದೆ.

ರಣದೀಪ್ ಸುರ್ಜೇವಾಲಾ ಅವರು ನಟಿ, ಬಿಜೆಪಿ ಸಂಸದೆ ಹೇಮಾ ಮಾಲಿನಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳಿಗಾಗಿ ಭಾರತೀಯ ಚುನಾವಣಾ ಆಯೋಗ  ಮಂಗಳವಾರ ಈ ಕ್ರಮ ತೆಗೆದುಕೊಂಡಿದೆ.

ಇಸಿಐ ಆದೇಶದ ಪ್ರಕಾರ, ಸುರ್ಜೇವಾಲಾ ಅವರು ಇಂದು ಸಂಜೆ 6 ಗಂಟೆಯಿಂದ ಮುಂದಿನ 48 ಗಂಟೆಗಳ ಕಾಲ  ಸಾರ್ವಜನಿಕ ಸಭೆಗಳನ್ನು ನಡೆಸಲು ನಿಷೇಧ ಹೇರಲಾಗಿದೆ.

ಭಾರತದ ಸಂವಿಧಾನದ 324 ನೇ ವಿಧಿಯ ಅಡಿಯಲ್ಲಿ ಯಾವುದೇ ಸಾರ್ವಜನಿಕ ಸಭೆಗಳು, ಸಾರ್ವಜನಿಕ ಮೆರವಣಿಗೆಗಳು, ಸಾರ್ವಜನಿಕ ರ್ಯಾಲಿಗಳು, ರೋಡ್‌ ಶೋಗಳು ಮತ್ತು ಸಂದರ್ಶನಗಳು, ಮಾಧ್ಯಮಗಳಲ್ಲಿ ಸಾರ್ವಜನಿಕ ಹೇಳಿಕೆಗಳನ್ನು ನಡೆಸದಂತೆ ರಣದೀಪ್ ಸುರ್ಜೆವಾಲಾ ಅವರನ್ನು ನಿರ್ಬಂಧಿಸುತ್ತದೆ ಎಂದು ಚುನಾವಣಾ ಸಮಿತಿಯು ತನ್ನ ನೋಟಿಸ್‌ನಲ್ಲಿ ಮಾಹಿತಿ ನೀಡಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು