ನವದೆಹಲಿ: ನೈಋತ್ಯ ದೆಹಲಿಯ ಜಿಲ್ಲಾ ಮ್ಯಾಜಿಸ್ಟ್ರೇಟ್ ಲಕ್ಷ್ಯ ಸಿಂಘಾಲ್ ಅವರು ಅರ್ಚಕರೊಬ್ಬರನ್ನು ತಮ್ಮ ಅಧಿಕೃತ ಕುರ್ಚಿಯಲ್ಲಿ ಕುಳಿತುಕೊಳ್ಳಲು ಅವಕಾಶ ನೀಡಿರುವ ದೃಶ್ಯ ಜಾಲತಾಣಗಳಲ್ಲಿ ವೈರಲ್ ಆಗಿದೆ.
ವಿಡಿಯೋದಲ್ಲಿ ಸಿಂಘಾಲ್ ಅರ್ಚಕರನ್ನು ಸ್ವಾಗತಿಸಿ ಕುರ್ಚಿಯಲ್ಲಿ ಕುಳ್ಳಿರಿಸಿ ಶಾಲು ಹೊದೆಸಿ ಸನ್ಮಾನಿಸುವ ದೃಶ್ಯವಿದೆ. ಈ ಬಗ್ಗೆ ದೆಹಲಿ ಸರ್ಕಾರ
ಸರ್ಕಾರ ಮತ್ತು ಲೆಫ್ಟಿನೆಂಟ್ ಗವರ್ನರ್ ಕಚೇರಿ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಸಿಂಘಾಲ್ ಅವರು ಅರುಣಾಚಲ ಪ್ರದೇಶ-ಗೋವಾ-ಮಿಜೋರಾಂ ಕೇಡರ್ಗೆ ಸೇರಿದ 2019 ನೇ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿದ್ದಾರೆ.