News Karnataka Kannada
Sunday, May 05 2024
ದೆಹಲಿ

ವಿಶ್ವಕಪ್ ಫೈನಲ್ ದಿನ ವಿಮಾನ ಹಾರಾಡುವಂತಿಲ್ಲ ಎಂದು ಧಮ್ಕಿ ಹಾಕಿದ ಉಗ್ರ ಯಾರು ಗೊತ್ತಾ

Do you know who the terrorist who threatened not to fly a plane on the day of the World Cup final
Photo Credit : IANS

ನವದೆಹಲಿ: ಖಲಿಸ್ತಾನಿ ಉಗ್ರ ಪೋಷಕ ಗುರುಪತ್ವಂತ್ ಸಿಂಗ್ ಪನ್ನು ಭಾರತ ಕೆನಡಾ ಸಂಬಂಧಕ್ಕೆ ಹುಳಿಹಿಂಡಿದ್ದು ಎಲ್ಲರಿಗೂ ಗೊತ್ತಿದೆ. ಕ್ರಿಕೆಟ್ ವಿಶ್ವಕಪ್ ಫೈನಲ್ ದಿನ, ಅಂದರೆ ನವೆಂಬರ್ 19ರಂದು ಏರ್ ಇಂಡಿಯಾ ವಿಮಾನಗಳು ಹಾರಾಡುವಂತಿಲ್ಲ ಎಂದು ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನು ಬೆದರಿಕೆ ಹಾಕಿದ್ದಾನೆ.

ಸಿಖ್ಸ್ ಫಾರ್ ಜಸ್ಟಿಸ್ ವಾಟರ್‌ಮಾರ್ಕ್ ಹೊಂದಿರುವ ವೀಡಿಯೊದಲ್ಲಿ ಗುರುಪತ್ವಂತ್ ಸಿಂಗ್ ಪನ್ನು ಮಾತನಾಡುತ್ತಿರುವುದನ್ನು ಸಾಮಾಜಿಕ ಮಾಧ್ಯಮ ಎಕ್ಸ್​​ ಬಳಕೆದಾರರು ಹಂಚಿಕೊಂಡಿದ್ದಾರೆ.

ನವೆಂಬರ್ 19 ರಂದು ಏರ್ ಇಂಡಿಯಾ ವಿಮಾನಗಳ ಸಂಚಾರಕ್ಕೆ ಅಡ್ಡಿಪಡಿಸುವುದಾಗಿ ಅತ ಬೆದರಿಕೆ ಹಾಕಿದ್ದಾನೆ. ನವೆಂಬರ್ 19 ರಂದು ಜಾಗತಿಕ ದಿಗ್ಬಂಧನದ ಭಾಗವಾಗಿ, ನಾವು ಏರ್ ಇಂಡಿಯಾವನ್ನು ಕಾರ್ಯನಿರ್ವಹಿಸಲು ಅನುಮತಿಸುವುದಿಲ್ಲ. ನಾವು ನವೆಂಬರ್ 19 ರಿಂದ ಏರ್ ಇಂಡಿಯಾ ಸೇವೆಗಳನ್ನು ಬಳಸದಂತೆ ಸಿಖ್ ಸಮುದಾಯದ ಎಲ್ಲಾ ಸದಸ್ಯರಿಗೆ ಸಲಹೆ ನೀಡುತ್ತೇವೆ. ಹಾಗೆ ಮಾಡಿದಲ್ಲಿ, ಅದು ನಿಮ್ಮ ಜೀವಕ್ಕೆ ಅಪಾಯವನ್ನುಂಟುಮಾಡುತ್ತದೆ ಎಂದು ಪನ್ನು ಬೆದರಿಕೆಯೊಡ್ಡಿದ್ದಾನೆ.

ನವೆಂಬರ್ 19 ರಂದು ಇಂದಿರಾ ಗಾಂಧಿ ವಿಮಾನ ನಿಲ್ದಾಣವನ್ನು ಮುಚ್ಚಬೇಕು ಎಂದೂ ಆತ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾನೆ. ಈ ನವೆಂಬರ್ 19 ‘ವಿಶ್ವ ಭಯೋತ್ಪಾದಕ ಕಪ್‌ನ ಫೈನಲ್‌’ಗೆ ಹೊಂದಿಕೆಯಾಗುತ್ತದೆ ಎಂದು ಆತ ‘ಕ್ರಿಕೆಟ್ ವಿಶ್ವಕಪ್ 2023’ ರ ಫೈನಲ್ ಅನ್ನು ಉಲ್ಲೇಖಿಸಿ ಪ್ರಸ್ತಾಪಿಸಿದ್ದಾನೆ. ಕ್ರಿಕೆಟ್ ವಿಶ್ವಕಪ್ ಫೈನಲ್ ಅಹಮದಾಬಾದ್‌ನಲ್ಲಿ ನಡೆಯಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು