News Karnataka Kannada
Sunday, April 28 2024
ದೆಹಲಿ

ಮೀಡಿಯಾ ಮುಂದೆ ಸುಮ್ಮನೆ ಕಾಮೆಂಟ್‌ ಮಾಡಬೇಡಿ: ನಾಯಕರಿಗೆ ಸೋನಿಯಾ ಎಚ್ಚರಿಕೆ

Don't just comment in front of media: Sonia Gandhi to leaders
Photo Credit : IANS

ಹೊಸದಿಲ್ಲಿ: ಪ್ರಜಾಪ್ರಭುತ್ವವನ್ನು ಉಳಿಸುವ ಸಲುವಾಗಿ ಸರ್ವಾಧಿಕಾರಿ ಸರಕಾರವನ್ನು ಅಂತ್ಯಗಾಣಿಸಲು ಪ್ರತಿ ನಾಯಕರು ಪಕ್ಷದೊಳಗೆ ಐಕ್ಯತೆ ಕಾಯ್ದುಕೊಳ್ಳಬೇಕು ಎಂದು ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆ ಅಭಿಪ್ರಾಯಪಟ್ಟಿದೆ.

ಪಕ್ಷದ ರಾಷ್ಟ್ರೀಯ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ಎಲ್ಲಾ ಹಂತದ ಎಲ್ಲಾ ನಾಯಕರು ಮತ್ತು ಕಾರ್ಯಕರ್ತರು ನಿಯಮಿತವಾಗಿ ಜನರನ್ನು ಭೇಟಿ ಮಾಡಿ ಅವರ ಸಮಸ್ಯೆಗಳನ್ನು ಆಲಿಸಬೇಕು ಎಂದು ಸಭೆಯಲ್ಲಿ ತಿಳಿಸಿದ್ದಾರೆ.

ಇದು ನಮಗೆ ವಿಶ್ರಾಂತಿಯ ಸಮಯವಲ್ಲ, ಕಳೆದ 10 ವರ್ಷಗಳಲ್ಲಿ ಬಿಜೆಪಿಯ ಆಡಳಿತದಲ್ಲಿ, ಸಾಮಾನ್ಯ ಜನರು ಎದುರಿಸುತ್ತಿರುವ ಸವಾಲುಗಳು ದ್ವಿಗುಣಗೊಂಡಿವೆ. ಬಡವರು, ರೈತರು, ಕಾರ್ಮಿಕರು, ಮಹಿಳೆಯರು ಮತ್ತು ಯುವಕರ ಸಮಸ್ಯೆಗಳನ್ನು ಪರಿಹರಿಸಲು ಪ್ರಧಾನಿ ನಿರಾಕರಿಸುತ್ತಿದ್ದಾರೆ. ಈ ಸಂದರ್ಭ ನಾವು ಮೂಕ ಪ್ರೇಕ್ಷಕರಾಗಿ ಉಳಿಯಲು ಸಾಧ್ಯವಿಲ್ಲ. ನಮ್ಮ ಪ್ರಜಾಪ್ರಭುತ್ವವನ್ನು ಉಳಿಸಲು ನಾವು ಒಗ್ಗೂಡಿ ಈ ಸರ್ವಾಧಿಕಾರಿ ಸರ್ಕಾರವನ್ನು ಕಿತ್ತೊಗೆಯಬೇಕು ಎಂದರು.

ಮಾಧ್ಯಮದ ಎದುರಿಗೆ ಕಾಂಗ್ರೆಸ್ ಹಿತಾಸಕ್ತಿಗೆ ಧಕ್ಕೆ ತರುವಂತಹ ಕಾಮೆಂಟ್‌ ಮಾಡದಂತೆ, ಈ ನಿಟ್ಟಿನಲ್ಲಿ ಸ್ವಯಂ ಸಂಯಮವನ್ನು ಕಾಪಾಡಿಕೊಳ್ಳುವಂತೆ ಸೋನಿಯಾ ಪಕ್ಷದ ನಾಯರಕನ್ನು ಕೇಳಿಕೊಂಡರು. ವೈಯಕ್ತಿಕ ಹಿತಾಸಕ್ತಿಗಳನ್ನು ಬದಿಗೊತ್ತಿ ಪಕ್ಷದ ಯಶಸ್ಸಿಗೆ ಅವಿರತವಾಗಿ ಶ್ರಮಿಸಬೇಕು. ಒಗ್ಗಟ್ಟು ಮತ್ತು ಶಿಸ್ತಿನ ಮೂಲಕವೇ ಎದುರಾಳಿಗಳನ್ನು ಸೋಲಿಸಲು ಸಾಧ್ಯ. ನಾವು ಒಗ್ಗಟ್ಟಾಗಿ ಇದ್ದ ಕಾರಣ ಕರ್ನಾಟಕದಲ್ಲಿ ಜಯ ಸಾಧ್ಯವಾಗಿದೆ. ಶಿಸ್ತಿನಿಂದ ಹೋರಾಟ ನಡೆಸಿ ದ್ವಿಗ್ವಿಜಯ ಸಾಧಿಸಲಾಗಿದೆ ಎಂದು ಸೋನಿಯಾ ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು