ದೆಹಲಿ: ಭಗವಾನ್ ರಾಮ ಲಲ್ಲಾನ ಪ್ರಾಣ-ಪ್ರತಿಷ್ಠೆಯೊಂದಿಗೆ ರಾಮ ಮಂದಿರವನ್ನು ಜ.22 ರಂದು ಉದ್ಘಾಟಿಸಲಾಗಿದ್ದು ಈಗಾಗಲೇ ವಿಧಿವಿಧಾನಗಳು ನಡೆಯುತ್ತಿದೆ. ಈ ಸಮಾರಂಭ ನಡೆಯುವ ಮೊದಲೇ, ವಿಐಪಿ ಟಿಕೆಟ್ಗಳು, ರಾಮಮಂದಿರ ಪ್ರಸಾದವನ್ನು ಒದಗಿಸುವುದಾಗಿ ಹೇಳಿಕೊಳ್ಳುವ ಹಲವಾರು ವಂಚನೆಯ ಲಿಂಕ್ಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಕೆಲವು ಪರಿಶೀಲಿಸದ, ಪ್ರಚೋದನಕಾರಿ ಮತ್ತು ನಕಲಿ ಸಂದೇಶಗಳನ್ನು ವಿಶೇಷವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಡಲಾಗುತ್ತಿದೆ, ಇದು ಕೋಮು ಸೌಹಾರ್ದತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುತ್ತದೆ” ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹೇಳಿದೆ .
ಅಮೆಜಾನ್ ನಲ್ಲಿ’ಶ್ರೀರಾಮ ಮಂದಿರ ಅಯೋಧ್ಯೆ ಪ್ರಸಾದ್’ ಎಂದು ಸಿಹಿತಿಂಡಿ ಮಾರಾಟ ಮಾಡುತ್ತಿರುವ ಬಗ್ಗೆ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರದಿಂದ ನೋಟಿಸ್ ಅನ್ನು ಸ್ವೀಕರಿಸಿದೆ. ಅಮೆಜಾನ್ ತನ್ನ ನೀತಿಗಳಿಗೆ ಅನುಗುಣವಾಗಿ ಅಂತಹ ಮಾರಾಟ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುತ್ತಿದೆ ಎಂದು ಹೇಳಿದೆ. ಕೆಲವು ದಿನಗಳ ಹಿಂದೆ, ಪ್ರಾಣ-ಪ್ರತಿಷ್ಠಾ ಕಾರ್ಯಕ್ರಮಕ್ಕಾಗಿ ತ್ವರಿತ ವಿಐಪಿ ಟಿಕೆಟ್ಗಳ ಭರವಸೆಯೊಂದಿಗೆ ನಕಲಿ ಕ್ಯೂ ಆರ್ ಕೋಡ್ ವಾಟ್ಸ್ಆಪ್ ನಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.
ಪ್ರಾಣ-ಪ್ರತಿಷ್ಠಾ ಕಾರ್ಯಕ್ರಮಕ್ಕಿರುವ ಆಹ್ವಾನವನ್ನು ಆಯ್ದ ಅತಿಥಿಗಳಿಗೆ ದೇವಾಲಯದ ಟ್ರಸ್ಟ್ ಮಾತ್ರ ಕಳುಹಿಸುತ್ತಿದೆ. ಹಾಗಾಗಿ ಈ ತರಹದ ವಂಚನೆಯಿಂದ ಜಾಗೃತರಾಗಿರಿ.
ಚುನಾವಣೆಗೂ ಮುನ್ನ ದಿನವೇ ಜಾರ್ಖಂಡ್ನ ಪಲಮುವಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು…
ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಎಲ್ಒಸಿ ಬಳಿ ಶನಿವಾರ ತಡರಾತ್ರಿ ಶಂಕಿತ ಪಾಕಿಸ್ತಾನಿ ಡ್ರೋನ್ ಮೇಲೆ ಭಾರತೀಯ ಸೇನಾ…
ಇಂದು ರಾಜ್ಯದ 15 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ದಕ್ಷಿಣ ಕನ್ನಡ, ಉಡುಪಿ,…
ಸೂಪರ್ಬಿಟ್ ರ್ಯಾಪಿಡ್ ಮತ್ತು ಬ್ಲಿಟ್ಜ್ ಚೆಸ್ ಟೂರ್ನಿಯಲ್ಲಿ ವಿಶ್ವದ ಅಗ್ರಮಾನ್ಯ ಆಟಗಾರ ನಾರ್ವೆಯ ಮ್ಯಾಗ್ನಸ್ ಕಾರ್ಲ್ಸನ್ ವಿರುದ್ಧ ಭಾರತದ ಗ್ರ್ಯಾಂಡ್…
ಕನ್ನಡ ಸಿನಿಮಾ ಹಾಗೂ ಕಿರುತೆರೆಯ ಯುವ ನಟ ಚೇತನ್ ಚಂದ್ರ ಮೇಲೆ ಬೆಂಗಳೂರಿನಲ್ಲಿ ಹಲ್ಲೆ ನಡೆದಿದೆ. ಕನಕಪುರ ರಸ್ತೆಯ ಕಗ್ಗಲಿಪುರದಲ್ಲಿ…
ಹಾಸನ ಪೆನ್ಡ್ರೈವ್ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ಹರಿಬಿಟ್ಟ ಆರೋಪದಲ್ಲಿ ಬಂಧನವಾಗಿರುವ ಆರೋಪಿಗಳಾದ ಚೇತನ್ ಹಾಗೂ ಲಿಖಿತ್ಗೆ 14…