News Karnataka Kannada
Tuesday, April 30 2024
ದೆಹಲಿ

ನವದೆಹಲಿ: ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಡಾ.ಡಿ.ವೀರೇಂದ್ರ ಹೆಗ್ಗಡೆ

Dr. D. Veerendra Heggade takes oath as Rajya Sabha MEMBER
Photo Credit : Twitter

ನವದೆಹಲಿ: ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಯವರು ರಾಜ್ಯಸಭಾ ಸದಸ್ಯರಾಗಿ ಗುರುವಾರ ಕನ್ನಡದಲ್ಲಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ವೀರೇಂದ್ರ ಹೆಗ್ಗಡೆ, ಸಂಗೀತ ನಿರ್ದೇಶಕ ಇಳಯರಾಜ, ಅಥ್ಲೀಟ್‌ ಪಿ.ಟಿ.ಉಷಾ ಹಾಗೂ ಚಲನಚಿತ್ರ ಕಥೆ- ಸಂಭಾಷಣೆಕಾರ ವಿಜಯೇಂದ್ರ ಪ್ರಸಾದ್‌ ಅವರನ್ನು ಜೂನ್‌ 7ರಂದು ನಾಮನಿರ್ದೇಶನ ಮಾಡಲಾಗಿತ್ತು. ಪ್ರಮಾಣವಚನ ಸ್ವೀಕರಿಸಿದ ಬಳಿಕ ಹೆಗ್ಗಡೆ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಧನ್ಯವಾದ ಹೇಳಿದರು.

ಬಳಿಕ ಸುದ್ದಿಗಾರರ ಜತೆಗೆ ಮಾತ ನಾಡಿದ ಅವರು, ಬೇರೆ ರಾಜ್ಯಗಳಿಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯನ್ನು ವಿಸ್ತರಣೆ ಮಾಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ, ಈ ಹಿಂದೆ ಹಲವು ಮಂದಿ ಮನವಿ ಮಾಡಿದ್ದರು. ಆಗ ಸಾಧ್ಯ ಆಗಿರಲಿಲ್ಲ. ಆದರೆ, ಈಗ ಸರ್ಕಾರ ನಮ್ಮ ಜತೆಗೆ ಇದೆ. ಹೀಗಾಗಿ, ಯೋಜನೆಯನ್ನು ವಿಸ್ತರಣೆ ಮಾಡಲು ವಿಚಾರ ಮಾಡುತ್ತಿದ್ದೇವೆ’ ಎಂದರು.

‘ಈ ಹಿಂದೆ ಪದ್ಮ ಪ್ರಶಸ್ತಿಗಳನ್ನು ಪಡೆಯಲು, ರಾಜ್ಯಸಭೆಗೆ ನಾಮನಿರ್ದೇಶನಗೊಳ್ಳಲು ಅರ್ಜಿ ಹಾಕಬೇಕಿತ್ತು. ನಾಯಕರಿಗೆ ದುಂಬಾಲು ಬೀಳಬೇಕಿತ್ತು. ಕಳೆದ ಐದು ವರ್ಷಗಳಲ್ಲಿ ಈ ವ್ಯವಸ್ಥೆಯಲ್ಲಿ ಬಹಳ ಸುಧಾರಣೆ ಆಗಿದೆ. ಸಾಧಕರನ್ನು ಗುರುತಿಸಿ ಆಯ್ಕೆ ಮಾಡುತ್ತಿದ್ದಾರೆ. ನಾಮನಿರ್ದೇಶನಗೊಳ್ಳುವ ಬಗ್ಗೆ ಆಸೆ ಪಟ್ಟಿರಲಿಲ್ಲ. ಆಕಸ್ಮಿಕವಾಗಿ ಸಿಕ್ಕಿದೆ. ಸಂತೋಷವಾಗಿದೆ. ರಾಜ್ಯಸಭಾ ಸದಸ್ಯರಾಗಿರುವುದರಿಂದ ಇನ್ನಷ್ಟು ಸೇವೆ ಮಾಡಲು ಅವಕಾಶ ಸಿಕ್ಕಿದೆ’ ಎಂದು ಅವರು ಹೇಳಿದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು