ನವದೆಹಲಿ: ರಾಷ್ಟ್ರದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಅವರು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಇಂದು ಬೆಳಗ್ಗೆ 10.15ಕ್ಕೆ ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ಮುಖ್ಯ ನ್ಯಾಯಮೂರ್ತಿ ಎನ್. ವಿ. ರಮಣ ಅವರು ದ್ರೌಪದಿ ಮುರ್ಮು ಅವರಿಗೆ ಪ್ರಮಾಣ ವಚನ ಬೋಧಿಸಿದರು.
ದ್ರೌಪದಿ ಮುರ್ಮು ದೇಶದ ಎರಡನೇ ಮಹಿಳಾ ರಾಷ್ಟ್ರಪತಿಯಾಗಿದ್ದಾರೆ, ಅತ್ಯುನ್ನತ ಸಾಂವಿಧಾನಿಕ ಹುದ್ದೆಯನ್ನು ಅಲಂಕರಿಸಿದ ಮೊದಲ ಬುಡಕಟ್ಟು ಮಹಿಳೆ ಎಂಬ ಹೆಗ್ಗಳಿಕೆ ಇವರದ್ದು. ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು, ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಸಂಸದರು ಹಾಗೂ ವಿವಿಧ ಸಚಿವರುಗಳು, ರಾಜ್ಯಪಾಲರು, ಮುಖ್ಯಮಂತ್ರಿಗಳು, ಸಂಸದರು, ರಾಜತಾಂತ್ರಿಕ ಕಾರ್ಯಗಳ ಮುಖ್ಯಸ್ಥರು, ಸರ್ಕಾರದ ಪ್ರಧಾನ ನಾಗರಿಕ ಮತ್ತು ಮಿಲಿಟರಿ ಅಧಿಕಾರಿಗಳು ಈ ಸಮಾರಂಭದಲ್ಲಿ ಭಾಗವಹಿಸಿದರು.
ಸಮಾರಂಭದ ಬಳಿಕ ರಾಷ್ಟ್ರಪತಿಗಳು ರಾಷ್ಟ್ರಪತಿ ಭವನಕ್ಕೆ ತೆರಳಲಿದ್ದು, ಅಲ್ಲಿ ಅವರಿಗೆ ಸೇನಾ ಗೌರವ ನೀಡಲಾಗುತ್ತದೆ. ಈ ಸಂದರ್ಭ ನಿರ್ಗಮಿತ ರಾಷ್ಟ್ರಪತಿಗೂ ಗೌರವ ಸಲ್ಲಿಸಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. ರಾಷ್ಟ್ರಪತಿ ಹುದ್ದೆ ಅಲಂಕರಿಸಿದ ಬುಡಕಟ್ಟು ಸಮುದಾಯದ ಮೊದಲನೆಯವರು ಎಂಬ ಹೆಗ್ಗಳಿಕೆಗೆ ಮುರ್ಮು ಪಾತ್ರರಾಗಿದ್ದಾರೆ.
ಯುನೈಟೆಡ್ ಅರಬ್ ಎಮಿರೇಟ್ಸ್ನ ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…
ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…
ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ನಡೆದಿದೆ.
ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…
ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…