ನವದೆಹಲಿ: ಸುಮಾರು ಎರಡು ತಿಂಗಳ ಬಳಿಕ ಭಾರತವು ಕೆನಡಾದ ಪ್ರಜೆಗಳಿಗೆ ಇ ವೀಸಾ ಸೇವೆಗಳನ್ನು ಪುನರಾರಂಭಿಸಿದೆ ಎಂದು ಮೂಲಗಳು ಬುಧವಾರ ತಿಳಿಸಿವೆ.
ಕೆನಡಾದ ಪ್ರಜೆ, ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್ ಅವರ ಹತ್ಯೆಯಲ್ಲಿ “ಭಾರತ ಸರ್ಕಾರದ ಏಜೆಂಟರು” ಭಾಗಿಯಾಗಿದ್ದಾರೆ ಎಂಬ ಕೆನಡಾದ ಹೇಳಿಕೆ ಬಳಿಕ ರಾಜತಾಂತ್ರಿಕ ಸಂಘರ್ಷ ಆರಂಭವಾಗಿದ್ದು, ಸೆಪ್ಟೆಂಬರ್ 21 ರಂದು ವೀಸಾ ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಪ್ರವಾಸಿ ವೀಸಾ ಸೇರಿದಂತೆ ಎಲ್ಲಾ ವೀಸಾ ಸೇವೆಗಳು ಈಗ ಪುನರಾರಂಭಗೊಂಡಿವೆ.
ವ್ಯಾಪಾರ ಮತ್ತು ವೈದ್ಯಕೀಯ ವೀಸಾ ಸೇರಿದಂತೆ ನಾಲ್ಕು ರೀತಿಯ ಸೇವೆಗಳು ಕಳೆದ ತಿಂಗಳು ಪುನರಾರಂಭಗೊಂಡಿತ್ತು. ಕಳೆದ ಸೆಪ್ಟೆಂಬರ್ನಲ್ಲಿ ಎರಡು ರಾಷ್ಟ್ರಗಳು ಸಹ ಪ್ರಯಾಣ ವೇಳೆ ಎಚ್ಚರಿಕೆ ವಹಿಸುವಂತೆ ಸಲಹೆ ನೀಡಿದ್ದವು.
ಭಾರತವು ಕೆನಡಾದಲ್ಲಿರುವ ತನ್ನ ನಾಗರಿಕರಿಗೆ ಮತ್ತು ಪ್ರಯಾಣ ಆರಂಭವಿಸುವ ವೇಳೆ ದ್ವೇಷದ ಅಪರಾಧಗಳ ಕುರಿತು ಎಚ್ಚರಿಕೆ ವಹಿಸುವಂತೆ ಸಲಹೆ ನೀಡಿತ್ತು.