ನವದೆಹಲಿ: ಸುಮಾರು ಎರಡು ತಿಂಗಳ ಬಳಿಕ ಭಾರತವು ಕೆನಡಾದ ಪ್ರಜೆಗಳಿಗೆ ಇ ವೀಸಾ ಸೇವೆಗಳನ್ನು ಪುನರಾರಂಭಿಸಿದೆ ಎಂದು ಮೂಲಗಳು ಬುಧವಾರ ತಿಳಿಸಿವೆ.
ಕೆನಡಾದ ಪ್ರಜೆ, ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್ ಅವರ ಹತ್ಯೆಯಲ್ಲಿ “ಭಾರತ ಸರ್ಕಾರದ ಏಜೆಂಟರು” ಭಾಗಿಯಾಗಿದ್ದಾರೆ ಎಂಬ ಕೆನಡಾದ ಹೇಳಿಕೆ ಬಳಿಕ ರಾಜತಾಂತ್ರಿಕ ಸಂಘರ್ಷ ಆರಂಭವಾಗಿದ್ದು, ಸೆಪ್ಟೆಂಬರ್ 21 ರಂದು ವೀಸಾ ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಪ್ರವಾಸಿ ವೀಸಾ ಸೇರಿದಂತೆ ಎಲ್ಲಾ ವೀಸಾ ಸೇವೆಗಳು ಈಗ ಪುನರಾರಂಭಗೊಂಡಿವೆ.
ವ್ಯಾಪಾರ ಮತ್ತು ವೈದ್ಯಕೀಯ ವೀಸಾ ಸೇರಿದಂತೆ ನಾಲ್ಕು ರೀತಿಯ ಸೇವೆಗಳು ಕಳೆದ ತಿಂಗಳು ಪುನರಾರಂಭಗೊಂಡಿತ್ತು. ಕಳೆದ ಸೆಪ್ಟೆಂಬರ್ನಲ್ಲಿ ಎರಡು ರಾಷ್ಟ್ರಗಳು ಸಹ ಪ್ರಯಾಣ ವೇಳೆ ಎಚ್ಚರಿಕೆ ವಹಿಸುವಂತೆ ಸಲಹೆ ನೀಡಿದ್ದವು.
ಭಾರತವು ಕೆನಡಾದಲ್ಲಿರುವ ತನ್ನ ನಾಗರಿಕರಿಗೆ ಮತ್ತು ಪ್ರಯಾಣ ಆರಂಭವಿಸುವ ವೇಳೆ ದ್ವೇಷದ ಅಪರಾಧಗಳ ಕುರಿತು ಎಚ್ಚರಿಕೆ ವಹಿಸುವಂತೆ ಸಲಹೆ ನೀಡಿತ್ತು.
ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.
ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…
ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…