Categories: ದೆಹಲಿ

ಇ.ಡಿ ಬಂಧನ : ನ್ಯಾಯಕ್ಕಾಗಿ ಸುಪ್ರೀಂ ಮೆಟ್ಟಿಲೇರಿದ ಹೇಮಂತ್ ಸೊರೆನ್

ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಇ.ಡಿ ಬಂಧನದ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ಜಾರ್ಖಂಡ್‌ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ.

ಮುಖ್ಯನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠದ ಮುಂದೆ ಮನವಿ ಮಾಡಿದ ಸೊರೆನ್ ಪರ ವಕೀಲ ಕಪಿಲ್ ಸಿಬಲ್, ಅರ್ಜಿಯನ್ನು ತ್ವರಿತವಾಗಿ ವಿಚಾರಣೆ ನಡೆಸಬೇಕು ಎಂದು ಕೋರಿದರು.

ಜೆ.ಬಿ ಪರ್ದಿವಾಲ ಹಾಗೂ ಮನೋಜ್ ಅವರೂ ಕೂಡ ಪೀಠದ ಭಾಗವಾಗಿದ್ದರು. ಮೇ 13ರಿಂದ ಜಾರ್ಖಂಡ್‌ನಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ಸೊರೆನ್ ಅವರಿಗೆ ತಮ್ಮ ಪಕ್ಷ ಜೆಎಂಎಂ ಪರ ಪ್ರಚಾರ ಮಾಡಲು ಅನುಮತಿ ನೀಡಬೇಕು ಎಂದು ಮನವಿ ಮಾಡಿದರು.

ಹೇಮಂತ್ ಸೊರೆನ್ ಅವರನ್ನು ಜನವರಿ 31ರಂದು ಬಂಧಿಸಲಾಗಿದೆ. ಫೆ.4ರಂದು ಅವರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್‌ ಫೆ. 28ರಂದು ತೀರ್ಪನ್ನು ಕಾಯ್ದಿರಿಸಿತಾದರೂ, ಪ್ರಕಟಿಸಿರಲಿಲ್ಲ. ಜಾರ್ಖಂಡ್‌ನಲ್ಲಿ ಮೇ 13ರಿಂದ ಮೊದಲ ಹಂತದ ಚುನಾವಣೆ ನಡೆಯಲಿದೆ.

ಹೀಗಾಗಿ ಸಂವಿಧಾನದ 32ನೇ ವಿಧಿಯಡಿ ನಾವು ಈ ಕೋರ್ಟ್‌ಗೆ ಮನವಿ ಸಲ್ಲಿಸಿದ್ದೆವು. ಇಲ್ಲಿಂದ ನೋಟಿಸ್‌ ನೀಡಿದ ಬಳಿಕ ಸೊರೆನ್ ಅವರ ಅರ್ಜಿಯನ್ನು ತಿರಸ್ಕರಿಸಿ ಹೈಕೋರ್ಟ್ ಆದೇಶ ನೀಡಿದೆ. ಹಕ್ಕುಗಳನ್ನು ಈ ರೀತಿ ಹತ್ತಿಕ್ಕುತ್ತಿರುವುದು ದುರದೃಷ್ಟಕರ’ ಎಂದು ಸಿಬಲ್ ಪೀಠದ ಮುಂದೆ ಹೇಳಿದರು.

ಸೊರೆನ್ ಸಲ್ಲಿಸಿರುವ ಮಧ್ಯಂತರ ಜಾಮೀನಿನ ಅರ್ಜಿಯ ವಿಚಾರಣೆಯನ್ನು ಮೇ 7ರಂದು ಕೈಗೆತ್ತಿಕೊಳ್ಳುವುದಾಗಿ ಪೀಠ ಹೇಳಿತು. ಅದೇ ದಿನ ಈ ಅರ್ಜಿಯನ್ನು ವಿಚಾರಣೆ ನಡೆಸಿ ಎಂದು ಸಿಬಲ್ ಪೀಠಕ್ಕೆ ಕೋರಿದರು ಎಂಬ ಮಾಹಿತಿ ತಿಳಿದು ಬಂದಿದೆ.

Chaitra Kulal

Recent Posts

ಸ್ಥಳೀಯ ವಾಹನಗಳಿಗೆ ಟೋಲ್ ಕಡಿತ: ಸ್ಥಳೀಯರಿಂದ ಸಾಸ್ತಾನ ಟೋಲ್ ಗೇಟ್ ಗೆ ಮುತ್ತಿಗೆ

ಕಳೆದ ಹಲವು ದಿನಗಳಿಂದ ಸ್ಥಳೀಯ ವಾಹನಗಳಿಗೆ ಫಾಸ್ಟ್ ಟ್ಯಾಗ್ ನಲ್ಲಿ ಶುಲ್ಕ ಕಡಿತವಾಗುತ್ತಿರುವುದನ್ನು ವಿರೋಧಿಸಿ ಸ್ಥಳೀಯರು ಸಾಸ್ತಾನ ಟೋಲ್ ಗೇಟ್…

4 mins ago

ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ : ತುರ್ತು ಭೂ ಸ್ಪರ್ಶ

ಕೆಂಪೇಗೌಡ ವಿಮಾನ ನಿಲ್ದಾಣದಿಂದ ಕೇರಳದ ಕೊಚ್ಚಿಗೆ ಹೊರಟಿದ್ದ ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಪರಿಣಾಮ ಏರ್ ಇಂಡಿಯಾ ವಿಮಾನವು…

17 mins ago

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ ಬಿಜೆಪಿ ಮುಖಂಡನ ಬಂಧನ : ಠಾಣೆಗೆ ಹರೀಶ್ ಪೂಂಜ ಮುತ್ತಿಗೆ

ಮೇಲಂತಬೆಟ್ಟು ಅಕ್ರಮ ಕೋರೆಗೆ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಶಾಸಕ ಹರೀಶ್ ಪೂಂಜ ಆಪ್ತ ಬಿಜೆಪಿ ಯುವ ಮೋರ್ಚಾ ಮುಖಂಡ…

40 mins ago

ರಾತ್ರಿ 1:30 ಆದರೂ ನಿಲ್ಲದ ರೆಡ್​ ಆರ್ಮಿ ಹರ್ಷ; ವಿಡಿಯೋ ಮಾಡಿ ಶೇರ್​ ಮಾಡಿದ ಕೊಹ್ಲಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2024ರಲ್ಲಿ ಅದ್ಭುತವನ್ನೇ ಮಾಡಿದೆ. ಸತತ ಪಂದ್ಯಗಳಲ್ಲಿ ಸೋತು ಒಂದು ಹಂತದಲ್ಲಿ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ…

45 mins ago

ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರೆಂಟ್

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಶನಿವಾರ ಅರೆಸ್ಟ್ ವಾರಂಟ್…

57 mins ago

ಸರಣಿ ಅಪಘಾತ: ಎರ್ಟಿಗಾ ಕಾರು ಸಂಪೂರ್ಣ ‌ನಜ್ಜುಗುಜ್ಜು

ಭೀಕರ ಸರಣಿ ಅಪಘಾತವು ಬೆಳಗಿನ ಜಾವ 4 ಗಂಟೆ ಸಮಯದಲ್ಲಿ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ.

1 hour ago