ನವದೆಹಲಿ: ಅಕ್ರಮ ಮದ್ಯ ನೀತಿ ಹಗರಣದ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (ಇಡಿ)ವು 6ನೇ ಸಮನ್ಸ್ ಅನ್ನು ಜಾರಿ ಮಾಡಿದೆ.
ಈಗಾಗಲೇ ಇಡಿಯ 5 ಸಮನ್ಸ್ಗಳನ್ನು ಕಡೆಗಣಿಸಿ ವಿಚಾರಣೆಗೆ ಹಾಜರಾಗಿಲ್ಲ. ಹೀಗಾಗಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಫೆ.17ರಂದು ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುವಂತೆ ಮತ್ತೆ ಸಮನ್ಸ್ ನೀಡಲಾಗಿದೆ.
ಈ ಕುರಿತು ಎಲೆಕ್ಷನ್ ಕ್ಯಾಂಪೇನ್ ಮಾಡದಂತೆ ತಡೆಯುವ ಉದ್ದೇಶದಿಂದ ಈ ಸಮನ್ಸ್ಗಳನ್ನ ಇಡಿ ನೀಡುತ್ತಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.
ಈ ಹಿಂದೆ ಸಿಎಂ ಕೇಜ್ರಿವಾಲ್ ಅವರಿಗೆ ನವೆಂಬರ್ 02, ಡಿಸೆಂಬರ್ 21, ಜನವರಿ 3, 18 ಹಾಗೂ ಫೆ.02 ರಂದು ಸಮನ್ಸ್ ನೀಡಿತ್ತು. ಇವೆಲ್ಲ ಸುಳ್ಳು ಆರೋಪ ಎಂದು ಇಡಿ ಮುಂದೆ ವಿಚಾರಣೆಗೆ ಹಾಜರಾಗಿರಲಿಲ್ಲ. ಇದರಿಂದ ಕೇಜ್ರಿವಾಲ್ ವಿಚಾರಣೆಗೆ ಹಾಜರಾಗುತ್ತಿಲ್ಲ ಎಂದು ಆರೋಪಿಸಿ ಇಡಿ ಕೋರ್ಟ್ಗೆ ದೂರು ನೀಡಿತ್ತು.