ನವದೆಹಲಿ: ಬಿಜೆಪಿ ನಾಯಕಿ ಹೇಮಾ ಮಾಲಿನಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲ’ ಅವರಿಗೆ ಚುನಾವಣಾ ಆಯೋಗ ನೋಟಿಸ್ ನೀಡಿದ್ದು ಈ ಬಗ್ಗೆ ಐಎನ್ ಸಿ ಅಧ್ಯಕ್ಷರಿಂದ ಕ್ರಮ ಕೈಗೊಳ್ಳಬೇಕೆಂದು ಎಂದು ಒತ್ತಾಯಿಸಿದೆ.
ಬಿಜೆಪಿ ನಾಯಕಿ ಹೇಮಾ ಮಾಲಿನಿ ವಿರುದ್ಧ ಕಾಮೆಂಟ್ ಮಾಡಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಅವರಿಗೆ ಇಸಿಐ ನೋಟಿಸ್ ನೀಡಿದೆ; ಏಪ್ರಿಲ್ 11, 2024 ರೊಳಗೆ ಪ್ರತಿಕ್ರಿಯೆಯನ್ನು ಕೋರಲಾಗಿದೆ ಎಂದು ಸಂಜೆ 5ಕ್ಕೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಆಯೋಗ ಬರೆದುಕೊಂಡಿದೆ.
ಪಕ್ಷದ ಮುಖಂಡರು ಮತ್ತು ಪದಾಧಿಕಾರಿಗಳು ಮಹಿಳೆಯರ ಬಗ್ಗೆ ಗೌರವಯುತವಾದ ಸಾರ್ವಜನಿಕ ಸಂವಾದವನ್ನು ಖಾತ್ರಿಪಡಿಸುವ ಬಗ್ಗೆ ಐಎನ್ಎ ಅಧ್ಯಕ್ಷರಿಂದ ಇಎಸ್ಐ ಬೇಡಿಕೆಗಳು, ಚುನಾವಣಾ ಪ್ರಚಾರವು ಮಹಿಳೆಯರಿಗೆ ಯಾವುದೇ ರೀತಿಯ ಅವಮಾನಕ್ಕೆ ವೇದಿಕೆಯಾಗಲು ಬಿಡುವುದಿಲ್ಲ ಎಂದು ಪುನರುಚ್ಚರಿಸಿದ್ದಾರೆ
ನೋಟಿಸ್ ನಲ್ಲಿ ಎಲ್ಲಾ ಪಕ್ಷದ ನಾಯಕರು ಮಹಿಳೆಯರ ಬಗ್ಗೆ ಮಾತನಾಡುವಾಗ ಮಹಿಳೆಯರ ಗೌರವ ಮತ್ತು ಘನತೆಯನ್ನು ಎತ್ತಿಹಿಡಿಯುವ ಆಯೋಗದ ಸಲಹೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಈ ಕುರಿತು ಎನ್ಐಸಿ ಪಕ್ಷದ ಅಧ್ಯಕ್ಷರು ಏಪ್ರಿಲ್ 11, 2024 ರೊಳಗೆ ಪ್ರತಿಕ್ರಿಯಿಸಬೇಕು ಎಂದು ಬರೆಯಲಾಗಿದೆ.