News Karnataka Kannada
Friday, May 03 2024
ದೆಹಲಿ

ರಾಜೀನಾಮೆ ನೀಡಿದ ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್

ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್ ಅವರು ರಾಜೀನಾಮೆ ನೀಡಿದ್ದಾರೆ. ಸದ್ಯ ಗೋಯಲ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಗೀಕರಿಸಿದ್ದಾರೆ.
Photo Credit : News Kannada

ದೆಹಲಿ: ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್ ಅವರು ರಾಜೀನಾಮೆ ನೀಡಿದ್ದಾರೆ. ಸದ್ಯ ಗೋಯಲ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಗೀಕರಿಸಿದ್ದಾರೆ.

ಅರುಣ್ ಗೋಯಲ್ ಅಧಿಕಾರಾವಧಿ 2027ರವರೆಗೆ ಇತ್ತು.

ಮುಂದಿನ ವಾರ ಲೋಕಸಭಾ ಚುನಾವಣೆ ದಿನಾಂಕವನ್ನು ಘೋಷಿಸುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಆದರೆ ಗೋಯಲ್​ ಅವರ ರಾಜೀನಾಮೆಯಿಂದ ಚುನಾವಣಾ ದಿನಾಂಕ ಘೋಷಣೆ ಮತ್ತಷ್ಟು ಮುಂದೆ ಹೋಗಬಹುದು ಎಂದು ವರದಿ ಆಗಿದೆ.

ಗೋಯಲ್​ ಅವರ ರಾಜೀನಾಮೆಯಿಂದಾಗಿ ಇದೀಗ ಚುನಾವಣಾ ಸಮಿತಿಯಲ್ಲಿ ಎರಡು ಚುನಾವಣಾ ಆಯುಕ್ತ ಸ್ಥಾನಗಳು ಖಾಲಿಯಾಗಿವೆ.

ಅರುಣ್ ಗೋಯಲ್​ ಅವರು ಪಂಜಾಬ್ ಕೇಡರ್‌ನಲ್ಲಿ 1985ರ ಬ್ಯಾಚ್​ನ ಐಎಎಸ್ ಅಧಿಕಾರಿ ಆಗಿದ್ದರು. ನವೆಂಬರ್ 18, 2022 ರಂದು ಸ್ವಯಂ ನಿವೃತ್ತಿ ಪಡೆದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು